<p><strong>ನವದೆಹಲಿ:</strong> ‘ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು. </p>.<p>ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾರಜೋಳ ಪ್ರಶ್ನೆಗೆ ಉತ್ತರಿಸಿದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ‘ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಳು ಹೆದ್ದಾರಿ ಯೋಜನೆಗಳು ಪ್ರಗತಿಯಲ್ಲಿವೆ’ ಎಂದರು. </p>.<p>‘₹1,167 ಕೋಟಿ ವೆಚ್ಚದಲ್ಲಿ ಚಳ್ಳಕೆರೆ-ಹಿರಿಯೂರು ಹೆದ್ದಾರಿಯನ್ನು ನಾಲ್ಕು ಪಥದ ಹೆದ್ದಾರಿಯನ್ನಾಗಿ ಪರಿವರ್ತಿಸುವ ಕೆಲಸ ಶೇ 95ರಷ್ಟು ಪೂರ್ಣಗೊಂಡಿದೆ. ₹109 ಕೋಟಿ ವೆಚ್ಚದ ಹೊಸದುರ್ಗ-ಹೊಳಲ್ಕೆರೆ ದ್ವಿಪಥ ಹೆದ್ದಾರಿ ಕಾಮಗಾರಿ ಶೇ 92ರಷ್ಟು ಮುಗಿದಿದೆ. ಕಡೂರು-ಹೊಸದುರ್ಗ ದ್ವಿಪಥ ಹೆದ್ದಾರಿ ಕಾಮಗಾರಿ ಶೇ 13ರಷ್ಟು ಮುಗಿದಿದೆ. ಚಿತ್ರದುರ್ಗ– ಶಿವಮೊಗ್ಗ ನಡುವಿನ ₹518 ಕೋಟಿಯ ಕಾಮಗಾರಿ ಶೇ 75ರಷ್ಟು ಆಗಿದೆ. ಶಿರಾ ಪಟ್ಟಣದ ಹತ್ತಿರ ಬೈಪಾಸ್ ರಸ್ತೆ ನಿರ್ಮಾಣಕ್ಕೆ ₹584 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಟೆಂಡರ್ ಹಂತದಲ್ಲಿದೆ’ ಎಂದು ಸಚಿವರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು. </p>.<p>ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾರಜೋಳ ಪ್ರಶ್ನೆಗೆ ಉತ್ತರಿಸಿದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ‘ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಳು ಹೆದ್ದಾರಿ ಯೋಜನೆಗಳು ಪ್ರಗತಿಯಲ್ಲಿವೆ’ ಎಂದರು. </p>.<p>‘₹1,167 ಕೋಟಿ ವೆಚ್ಚದಲ್ಲಿ ಚಳ್ಳಕೆರೆ-ಹಿರಿಯೂರು ಹೆದ್ದಾರಿಯನ್ನು ನಾಲ್ಕು ಪಥದ ಹೆದ್ದಾರಿಯನ್ನಾಗಿ ಪರಿವರ್ತಿಸುವ ಕೆಲಸ ಶೇ 95ರಷ್ಟು ಪೂರ್ಣಗೊಂಡಿದೆ. ₹109 ಕೋಟಿ ವೆಚ್ಚದ ಹೊಸದುರ್ಗ-ಹೊಳಲ್ಕೆರೆ ದ್ವಿಪಥ ಹೆದ್ದಾರಿ ಕಾಮಗಾರಿ ಶೇ 92ರಷ್ಟು ಮುಗಿದಿದೆ. ಕಡೂರು-ಹೊಸದುರ್ಗ ದ್ವಿಪಥ ಹೆದ್ದಾರಿ ಕಾಮಗಾರಿ ಶೇ 13ರಷ್ಟು ಮುಗಿದಿದೆ. ಚಿತ್ರದುರ್ಗ– ಶಿವಮೊಗ್ಗ ನಡುವಿನ ₹518 ಕೋಟಿಯ ಕಾಮಗಾರಿ ಶೇ 75ರಷ್ಟು ಆಗಿದೆ. ಶಿರಾ ಪಟ್ಟಣದ ಹತ್ತಿರ ಬೈಪಾಸ್ ರಸ್ತೆ ನಿರ್ಮಾಣಕ್ಕೆ ₹584 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಟೆಂಡರ್ ಹಂತದಲ್ಲಿದೆ’ ಎಂದು ಸಚಿವರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>