<p><strong>ತುಮಕೂರು</strong>: ‘ಬೆಳಗಾವಿಯ ಬಳಿಯ ಚೋರ್ಲಾ ಘಾಟ್ ಬಳಿ ನಡೆದ ₹400 ಕೋಟಿ ಮಹಾ ದರೋಡೆ ಪ್ರಕರಣದ ಕುರಿತು ಮಹಾರಾಷ್ಟ್ರ ಸರ್ಕಾರ ಎಸ್ಐಟಿ ರಚಿಸಿದೆ. ಈವರೆಗೆ ಸ್ವಲ್ಪ ಮಾಹಿತಿ ಸಿಕ್ಕಿದ್ದು ಅದರಲ್ಲೂ ತುಂಬಾ ಗೊಂದಲಗಳಿವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಸ್ಐಟಿ ವರದಿ ಸಲ್ಲಿಸುವ ತನಕ ಏನೂ ಹೇಳಲು ಆಗುವುದಿಲ್ಲ’ ಎಂದು ಹೇಳಿದರು.</p>.<p>‘ಇದುವರೆಗೆ ಬಂದ ಮಾಹಿತಿ ಪ್ರಕಾರ ಈ ಪ್ರಕರಣದಲ್ಲಿ ಪೊಲೀಸರು ಭಾಗಿಯಾಗಿದ್ದು ಕಂಡುಬಂದಿಲ್ಲ. ತನಿಖೆಯಲ್ಲಿ ಏನು ಬರುತ್ತದೆ ಎಂಬು<br>ವುದು ನೋಡಬೇಕು’ ಎಂ ದರು. </p>.<p>ದೂರು ಅಸ್ಪಷ್ಟ: ’₹400 ಕೋಟಿ ಲೂಟಿ ಮಾಡಲಾಗಿದೆ ಎಂಬ ದೂರು ಅಸ್ಪಷ್ಟವಾಗಿದೆ. ನಿರ್ದಿಷ್ಟ ಸ್ಥಳ ಉಲ್ಲೇಖಿಸದ ಕಾರಣ ವದಂತಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.</p>.<p>‘ಘಾಟ್ ವಿಭಾಗವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ವ್ಯಾಪ್ತಿಯಲ್ಲಿ ಹರಡಿದೆ. ಮಹಾ<br>ರಾಷ್ಟ್ರ ಪೊಲೀಸರು ಮಾಹಿತಿ ಹಂಚಿಕೊಂಡರೆ, ನಮ್ಮ ಪೊಲೀಸರು ತನಿಖೆ ಮುಂದುವರಿಸುವರು’ ಎಂದರು.</p>.<p>ಬಿಜೆಪಿಯವರ ಸುಳ್ಳು: ‘ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಜನರ ದಾರಿ ತಪ್ಪಿಸುತ್ತಿದ್ದಾರೆ. ಅಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಣ ಸಾಗಿಸುತ್ತಿದ್ದರೆನ್ನಲಾಗಿದೆ’ ಎಂದು ಸಚಿವ ಎನ್.ಎಸ್.ಬೋಸರಾಜು ಟೀಕಿಸಿದರು.</p>.<p>‘ಟ್ರಕ್ ಸಹಿತ ಹೈಜಾಕ್ ಆಗಿರುವ ₹ 400 ಕೋಟಿ ಕಾಂಗ್ರೆಸ್ಸಿನದ್ದು’ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಅವರ ಹೇಳಿಕೆಗೆ ಹೀಗೆ ಪ್ರತಿಕ್ರಿಯಿಸಿದರು.</p>.<p>ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಾಹನ ಹೈಜಾಕ್ ಮಾಡಿದವರು, ದೂರು ನೀಡಿದ ಎಲ್ಲ ಮಹಾರಾಷ್ಟ್ರದವರೇ. ತನಿಖೆ ನಡೆಯುತ್ತಿದ್ದು ಕಾನೂನು ಕ್ರಮವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಬೆಳಗಾವಿಯ ಬಳಿಯ ಚೋರ್ಲಾ ಘಾಟ್ ಬಳಿ ನಡೆದ ₹400 ಕೋಟಿ ಮಹಾ ದರೋಡೆ ಪ್ರಕರಣದ ಕುರಿತು ಮಹಾರಾಷ್ಟ್ರ ಸರ್ಕಾರ ಎಸ್ಐಟಿ ರಚಿಸಿದೆ. ಈವರೆಗೆ ಸ್ವಲ್ಪ ಮಾಹಿತಿ ಸಿಕ್ಕಿದ್ದು ಅದರಲ್ಲೂ ತುಂಬಾ ಗೊಂದಲಗಳಿವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಸ್ಐಟಿ ವರದಿ ಸಲ್ಲಿಸುವ ತನಕ ಏನೂ ಹೇಳಲು ಆಗುವುದಿಲ್ಲ’ ಎಂದು ಹೇಳಿದರು.</p>.<p>‘ಇದುವರೆಗೆ ಬಂದ ಮಾಹಿತಿ ಪ್ರಕಾರ ಈ ಪ್ರಕರಣದಲ್ಲಿ ಪೊಲೀಸರು ಭಾಗಿಯಾಗಿದ್ದು ಕಂಡುಬಂದಿಲ್ಲ. ತನಿಖೆಯಲ್ಲಿ ಏನು ಬರುತ್ತದೆ ಎಂಬು<br>ವುದು ನೋಡಬೇಕು’ ಎಂ ದರು. </p>.<p>ದೂರು ಅಸ್ಪಷ್ಟ: ’₹400 ಕೋಟಿ ಲೂಟಿ ಮಾಡಲಾಗಿದೆ ಎಂಬ ದೂರು ಅಸ್ಪಷ್ಟವಾಗಿದೆ. ನಿರ್ದಿಷ್ಟ ಸ್ಥಳ ಉಲ್ಲೇಖಿಸದ ಕಾರಣ ವದಂತಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.</p>.<p>‘ಘಾಟ್ ವಿಭಾಗವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ವ್ಯಾಪ್ತಿಯಲ್ಲಿ ಹರಡಿದೆ. ಮಹಾ<br>ರಾಷ್ಟ್ರ ಪೊಲೀಸರು ಮಾಹಿತಿ ಹಂಚಿಕೊಂಡರೆ, ನಮ್ಮ ಪೊಲೀಸರು ತನಿಖೆ ಮುಂದುವರಿಸುವರು’ ಎಂದರು.</p>.<p>ಬಿಜೆಪಿಯವರ ಸುಳ್ಳು: ‘ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಜನರ ದಾರಿ ತಪ್ಪಿಸುತ್ತಿದ್ದಾರೆ. ಅಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಣ ಸಾಗಿಸುತ್ತಿದ್ದರೆನ್ನಲಾಗಿದೆ’ ಎಂದು ಸಚಿವ ಎನ್.ಎಸ್.ಬೋಸರಾಜು ಟೀಕಿಸಿದರು.</p>.<p>‘ಟ್ರಕ್ ಸಹಿತ ಹೈಜಾಕ್ ಆಗಿರುವ ₹ 400 ಕೋಟಿ ಕಾಂಗ್ರೆಸ್ಸಿನದ್ದು’ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಅವರ ಹೇಳಿಕೆಗೆ ಹೀಗೆ ಪ್ರತಿಕ್ರಿಯಿಸಿದರು.</p>.<p>ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಾಹನ ಹೈಜಾಕ್ ಮಾಡಿದವರು, ದೂರು ನೀಡಿದ ಎಲ್ಲ ಮಹಾರಾಷ್ಟ್ರದವರೇ. ತನಿಖೆ ನಡೆಯುತ್ತಿದ್ದು ಕಾನೂನು ಕ್ರಮವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>