‘ನಾವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಪದೇ ಪದೇ ನಮಗೆ ಅನ್ಯಾಯವಾಗುತ್ತಿದೆ. ಅಲ್ಪಸಂಖ್ಯಾತರು ಎಂದು ಮುಸ್ಲಿಮರಿಗೆ ಅವಕಾಶ ಸಿಗುತ್ತಿದೆ. ಕ್ರೈಸ್ತ ಸಮುದಾಯಕ್ಕೆ ಅವಕಾಶಗಳೇ ಸಿಗುತ್ತಿಲ್ಲ. ಮುಸ್ಲಿಮರಿಗೆ ಟಿಕೆಟ್ ಕೊಡಬೇಡಿ ಎಂದು ನಾವು ಹೇಳುವುದಿಲ್ಲ. ರಾಜ್ಯದಲ್ಲಿ ನಮ್ಮ ಜನಸಂಖ್ಯೆಯೂ ಹೆಚ್ಚು ಇದೆ. ಹೀಗಾಗಿ, ನಮಗೆ ಪ್ರಾಧಾನ್ಯತೆ ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.