ಸಿಸಿಬಿ ಆರ್ಥಿಕ ಅಪರಾಧ ತಡೆ ವಿಭಾಗದಲ್ಲಿದ್ದ ಮೂವರೂ ಅಧಿಕಾರಿಗಳ ವಿರುದ್ಧ ಡಿಸಿಪಿಗಳಾದ ರವಿಕುಮಾರ್ ಮತ್ತು ಕುಲದೀಪ್ ಪ್ರತ್ಯೇಕವಾಗಿ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು. ಎರಡೂ ವರದಿ ಪರಿಶೀಲಿಸಿದ ಡಿಜಿ ಮತ್ತು ಐಜಿ ಪ್ರವೀಣ್ ಸೂದ್, ಭ್ರಷ್ಟಾಚಾರ ಆರೋಪದ ತನಿಖೆಯನ್ನು ಎಸಿಬಿಗೆ ಒಪ್ಪಿಸಿ ಆದೇಶಿಸಿದ್ದಾರೆ.