<p><strong>ಬೆಂಗಳೂರು:</strong> ಲಾಕ್ಡೌನ್ ವೇಳೆ ಸಿಗರೇಟ್ ಮಾರಾಟಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಕೆಲ ಕಂಪನಿಗಳಿಂದ ₹ 1.12 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಸಿಬಿ ಎಸಿಪಿ ಪ್ರಭುಶಂಕರ್, ಇನ್ಸ್ಪೆಕ್ಟರ್ಗಳಾದ ಅಜಯ್ ಹಾಗೂ ನಿರಂಜನ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಎಸಿಪಿ ಬಳಿಯಿಂದ ₹ 30 ಲಕ್ಷ ವಶಪಡಿಸಿಕೊಳ್ಳಲಾಗಿದೆ. ಪ್ರಭುಶಂಕರ್ ಜತೆ ಅಜಯ್, ನಿರಂಜನ ಕುಮಾರ್ ಪ್ರಕರಣದಲ್ಲಿ ಭಾಗಿ ಆಗಿರುವುದು ವಿಚಾರಣೆಯಿಂದ ದೃಢಪಟ್ಟಿದ್ದರಿಂದ ಮೂವರನ್ನೂ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಪಿ. ಭಾಸ್ಕರ್ರಾವ್ ತಿಳಿಸಿದರು.</p>.<p>ಸಿಸಿಬಿ ಡಿಸಿಪಿ ರವಿಕುಮಾರ್ ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಅವರಿಗೆ ವರದಿ ನೀಡಿದ್ದರು. ಬಳಿಕ ಅದು ಪೊಲೀಸ್ ಕಮಿಷನರ್ ಹಾಗೂ ಡಿಜಿಪಿ ಅವರ ಕೈಸೇರಿತ್ತು.</p>.<p>ಪ್ರತಿಷ್ಠಿತ ಸಿಗರೇಟ್ ಕಂಪನಿಯೊಂದರಿಂದ ಎರಡು ಕಂತುಗಳಲ್ಲಿ ₹ 62.5 ಲಕ್ಷ ಪಡೆದಿರುವುದೂ ಸೇರಿದಂತೆ ವಿವಿಧ ಕಂಪನಿಗಳಿಂದ<br />₹ 1.12 ಕೋಟಿ ಲಂಚ ಪಡೆಯಲಾಗಿದೆ ಎಂದು ರವಿಕುಮಾರ್ ವರದಿಯಲ್ಲಿ ತಿಳಿಸಿದ್ದಾರೆ.</p>.<p>ಇದರ ನಡುವೆಯೇ, ಅಜಯ್, ನಿರಂಜನ್ ಕುಮಾರ್ ಅವರು ಎಂ.ಡಿ. ಸನ್ಸ್ ಸಂಸ್ಥೆಯ ಮೇಲೆ ದಾಳಿ ಮಾಡಿದ್ದರು. ಹಣ ಹಂಚಿಕೆ ವಿಷಯದಲ್ಲಿ ಮೂವರ ಮಧ್ಯೆ ತಕರಾರು ಉಂಟಾಗಿದ್ದರಿಂದಲೇ ಈ ಇನ್ಸ್ಪೆಕ್ಟರ್ ಗಳು ಈ ದಾಳಿ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಈ ಸಂಬಂಧ ಎಂ.ಡಿ. ಸನ್ಸ್ ವಿತರಕರಾದ ಆದಿಲ್ ಅಜೀಜ್ ಮತ್ತು ಭೂಷಣ್ ಅವರ ವಿಚಾರಣೆ ನಡೆಯುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪ್ರತಿಷ್ಠಿತ ಕಂಪನಿ ಅಸಿಸ್ಟೆಂಟ್ ಮ್ಯಾನೇಜರ್ ಗೋವಿಂದರಾಜ್ ಮತ್ತು ಯಲಹಂಕ ರೌಡಿಶೀಟರ್ ಬಾಬು ಎಂಬುವರನ್ನು ಪೊಲೀಸರು ಹುಡುಕುತ್ತಿದ್ದಾರೆ.</p>.<p><strong>ಪಿ.ಸಿ. ಕಾಯ್ದೆಯಡಿ ಪ್ರಕರಣ ಏಕಿಲ್ಲ?</strong></p>.<p>ಸಿಗರೇಟ್ ಲಂಚ ಪ್ರಕರಣ ಬಯಲಿಗೆ ಬಂದು ವಾರವಾದರೂ ಆರೋಪಿ ಎಸಿಪಿ ಮತ್ತು ಇನ್ಸ್ಪೆಕ್ಟರ್ಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ (ಪಿ.ಸಿ) ಕಾಯ್ದೆಯಡಿ ಇನ್ನೂ ಏಕೆ ಪ್ರಕರಣ ದಾಖಲಿಸಿಲ್ಲ ಎಂಬ ಚರ್ಚೆ ಇಲಾಖೆಯಲ್ಲಿ ಮುನ್ನೆಲೆಗೆ ಬಂದಿದೆ.</p>.<p>ಅಧಿಕಾರಿಗಳಿಗೆ ಲಂಚ ಕೊಟ್ಟವರೂ ಸಿಕ್ಕಿದ್ದಾರೆ. ಲಂಚದಲ್ಲಿ ಸ್ವಲ್ಪ ಭಾಗ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಏಕೆ ಪ್ರಕರಣ ದಾಖಲಿಸುತ್ತಿಲ್ಲ ಎಂಬ ಚರ್ಚೆಗಳೂ ನಡೆದಿವೆ. ಪ್ರಕರಣದ ವಿಚಾರಣೆ ಮುಗಿದ ಬಳಿಕ ಪಿ.ಸಿ ಕಾಯ್ದೆಯಡಿ ಎಫ್ಐಆರ್ ದಾಖಲಿಸುವ ಕುರಿತು ಪರಿಶೀಲಿಸಲಾಗುವುದು ಎಂದೂ ಮೂಲಗಳು ಸ್ಪಷ್ಟಪಡಿಸಿವೆ.</p>.<p>ಅಧಿಕಾರಿಗಳ ವಿರುದ್ಧ ಸುಲಿಗೆ ಮತ್ತು ಎನ್ಡಿಎಂಎ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಾಕ್ಡೌನ್ ವೇಳೆ ಸಿಗರೇಟ್ ಮಾರಾಟಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಕೆಲ ಕಂಪನಿಗಳಿಂದ ₹ 1.12 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಸಿಬಿ ಎಸಿಪಿ ಪ್ರಭುಶಂಕರ್, ಇನ್ಸ್ಪೆಕ್ಟರ್ಗಳಾದ ಅಜಯ್ ಹಾಗೂ ನಿರಂಜನ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಎಸಿಪಿ ಬಳಿಯಿಂದ ₹ 30 ಲಕ್ಷ ವಶಪಡಿಸಿಕೊಳ್ಳಲಾಗಿದೆ. ಪ್ರಭುಶಂಕರ್ ಜತೆ ಅಜಯ್, ನಿರಂಜನ ಕುಮಾರ್ ಪ್ರಕರಣದಲ್ಲಿ ಭಾಗಿ ಆಗಿರುವುದು ವಿಚಾರಣೆಯಿಂದ ದೃಢಪಟ್ಟಿದ್ದರಿಂದ ಮೂವರನ್ನೂ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಪಿ. ಭಾಸ್ಕರ್ರಾವ್ ತಿಳಿಸಿದರು.</p>.<p>ಸಿಸಿಬಿ ಡಿಸಿಪಿ ರವಿಕುಮಾರ್ ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಅವರಿಗೆ ವರದಿ ನೀಡಿದ್ದರು. ಬಳಿಕ ಅದು ಪೊಲೀಸ್ ಕಮಿಷನರ್ ಹಾಗೂ ಡಿಜಿಪಿ ಅವರ ಕೈಸೇರಿತ್ತು.</p>.<p>ಪ್ರತಿಷ್ಠಿತ ಸಿಗರೇಟ್ ಕಂಪನಿಯೊಂದರಿಂದ ಎರಡು ಕಂತುಗಳಲ್ಲಿ ₹ 62.5 ಲಕ್ಷ ಪಡೆದಿರುವುದೂ ಸೇರಿದಂತೆ ವಿವಿಧ ಕಂಪನಿಗಳಿಂದ<br />₹ 1.12 ಕೋಟಿ ಲಂಚ ಪಡೆಯಲಾಗಿದೆ ಎಂದು ರವಿಕುಮಾರ್ ವರದಿಯಲ್ಲಿ ತಿಳಿಸಿದ್ದಾರೆ.</p>.<p>ಇದರ ನಡುವೆಯೇ, ಅಜಯ್, ನಿರಂಜನ್ ಕುಮಾರ್ ಅವರು ಎಂ.ಡಿ. ಸನ್ಸ್ ಸಂಸ್ಥೆಯ ಮೇಲೆ ದಾಳಿ ಮಾಡಿದ್ದರು. ಹಣ ಹಂಚಿಕೆ ವಿಷಯದಲ್ಲಿ ಮೂವರ ಮಧ್ಯೆ ತಕರಾರು ಉಂಟಾಗಿದ್ದರಿಂದಲೇ ಈ ಇನ್ಸ್ಪೆಕ್ಟರ್ ಗಳು ಈ ದಾಳಿ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಈ ಸಂಬಂಧ ಎಂ.ಡಿ. ಸನ್ಸ್ ವಿತರಕರಾದ ಆದಿಲ್ ಅಜೀಜ್ ಮತ್ತು ಭೂಷಣ್ ಅವರ ವಿಚಾರಣೆ ನಡೆಯುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪ್ರತಿಷ್ಠಿತ ಕಂಪನಿ ಅಸಿಸ್ಟೆಂಟ್ ಮ್ಯಾನೇಜರ್ ಗೋವಿಂದರಾಜ್ ಮತ್ತು ಯಲಹಂಕ ರೌಡಿಶೀಟರ್ ಬಾಬು ಎಂಬುವರನ್ನು ಪೊಲೀಸರು ಹುಡುಕುತ್ತಿದ್ದಾರೆ.</p>.<p><strong>ಪಿ.ಸಿ. ಕಾಯ್ದೆಯಡಿ ಪ್ರಕರಣ ಏಕಿಲ್ಲ?</strong></p>.<p>ಸಿಗರೇಟ್ ಲಂಚ ಪ್ರಕರಣ ಬಯಲಿಗೆ ಬಂದು ವಾರವಾದರೂ ಆರೋಪಿ ಎಸಿಪಿ ಮತ್ತು ಇನ್ಸ್ಪೆಕ್ಟರ್ಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ (ಪಿ.ಸಿ) ಕಾಯ್ದೆಯಡಿ ಇನ್ನೂ ಏಕೆ ಪ್ರಕರಣ ದಾಖಲಿಸಿಲ್ಲ ಎಂಬ ಚರ್ಚೆ ಇಲಾಖೆಯಲ್ಲಿ ಮುನ್ನೆಲೆಗೆ ಬಂದಿದೆ.</p>.<p>ಅಧಿಕಾರಿಗಳಿಗೆ ಲಂಚ ಕೊಟ್ಟವರೂ ಸಿಕ್ಕಿದ್ದಾರೆ. ಲಂಚದಲ್ಲಿ ಸ್ವಲ್ಪ ಭಾಗ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಏಕೆ ಪ್ರಕರಣ ದಾಖಲಿಸುತ್ತಿಲ್ಲ ಎಂಬ ಚರ್ಚೆಗಳೂ ನಡೆದಿವೆ. ಪ್ರಕರಣದ ವಿಚಾರಣೆ ಮುಗಿದ ಬಳಿಕ ಪಿ.ಸಿ ಕಾಯ್ದೆಯಡಿ ಎಫ್ಐಆರ್ ದಾಖಲಿಸುವ ಕುರಿತು ಪರಿಶೀಲಿಸಲಾಗುವುದು ಎಂದೂ ಮೂಲಗಳು ಸ್ಪಷ್ಟಪಡಿಸಿವೆ.</p>.<p>ಅಧಿಕಾರಿಗಳ ವಿರುದ್ಧ ಸುಲಿಗೆ ಮತ್ತು ಎನ್ಡಿಎಂಎ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>