‘ರಾಜ್ಯದ ಎಲ್ಲಾ ಕ್ಷೇತ್ರ, ಇಲಾಖೆ ಹಾಗೂ ಹಂತಗಳಲ್ಲಿಯೂ ಕನ್ನಡ ಭಾಷೆ ಬಳಸಿ, ಭಾಷಾ ಬಳಕೆಯ ವ್ಯಾಪ್ತಿ ವಿಸ್ತರಿಸಬೇಕು. ಆ ಮೂಲಕ ಕನ್ನಡವನ್ನು ಸಾರ್ವಭೌಮಗೊಳಿಸಲು ಸಹಕರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರದ ಮೂಲಕ ಕೋರಿದ್ದಾರೆ. ಎಲ್ಲಾ ವೈದ್ಯರು, ರೋಗಿಗಳಿಗೆ ಅರ್ಥವಾಗುವ ಭಾಷೆಯಲ್ಲೇ ಅವರಿಗಿರುವ ಕಾಯಿಲೆ, ತೆಗೆದುಕೊಳ್ಳಬೇಕಾದ ಔಷಧ ಹಾಗೂ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಲಹೆ ನೀಡಿದರೆ ಹೆಚ್ಚಿನ ಅನುಕೂಲವಾಗುತ್ತದೆ ಎಂದೂ ಮನವಿ ಮಾಡಿದ್ದಾರೆ. ಹೀಗಾಗಿ ಇಲಾಖೆಯಲ್ಲಿ ಕನ್ನಡ ಬಳಕೆ ಉತ್ತೇಜಿಸಲು ಸಂಸ್ಥೆಗಳ ಮುಖ್ಯಸ್ಥರು, ಮೇಲ್ವಿಚಾರಣಾ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಸೂಚಿಸಿದ್ದಾರೆ.