<p><strong>ಬೆಂಗಳೂರು: </strong>ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಲೇಖನಗಳನ್ನು ಬರೆಯಬಹುದು, ಪುಸ್ತಕಗಳನ್ನು ಪ್ರಕಟಿಸಬಹುದು, ದೂರದರ್ಶನ ಮತ್ತು ಸಿನಿಮಾಗಳಲ್ಲಿ ನಟನೆ ಮಾಡಬಹುದು!</p>.<p>ಆದರೆ, ಈ ಚಟುವಟಿಕೆಗಳು ವಾಣಿಜ್ಯ ಲಾಭದ ಉದ್ದೇಶ ಹೊಂದಿರಬಾರದು. ಕೇವಲ ಕಲಾತ್ಮಕ, ಸಾಹಿತ್ಯಕ, ವೈಜ್ಞಾನಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸ್ವರೂಪದ್ದಾಗಿರಬೇಕು. ಸರ್ಕಾರಿ ಕರ್ತವ್ಯಕ್ಕೆ ಚ್ಯುತಿ ತರುವಂತಿರಬಾರದು.</p>.<p>ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿರುವ ‘ಕರ್ನಾಟಕ ನಾಗರಿಕ ಸೇವಾ (ನಡತೆ) 2020’ ತಿದ್ದುಪಡಿ ನಿಯಮಾವಳಿಯ ಪ್ರಮುಖ ಅಂಶವಿದು. ಈ ಹಿಂದೆ ಇದ್ದ ಕಠಿಣ ನಿಯಮಗಳನ್ನು ಕೊಂಚ ಸಡಿಲಿಸಲಾಗಿದೆ. ಇದಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.</p>.<p>ಸಾಹಿತ್ಯಿಕ, ಕಲಾತ್ಮಕ ಮತ್ತು ವೈಜ್ಞಾನಿಕ ಸ್ವರೂಪದ ಪುಸ್ತಕಗಳನ್ನು ಪ್ರಕಾಶಕರ ಮೂಲಕ ಪ್ರಕಟಿಸಬಹುದು. ಕಲಾತ್ಮಕ ಮತ್ತು ವೈಜ್ಞಾನಿಕ ಸ್ವರೂಪ ಹೊಂದಿರುವ ಲೇಖನ ಬರೆಯಬಹುದು. ಇದಕ್ಕೆ ಸಂಬಂಧಿಸಿದ ಪ್ರಾಧಿಕಾರದ ಪೂರ್ವ ಅನುಮತಿ ಪಡೆಯುವ ಅಗತ್ಯವಿಲ್ಲ, ಸಾಂದರ್ಭಿಕವಾಗಿ ತೊಡಗಿಸಿಕೊಳ್ಳಬಹುದು ಎಂದು ನಿಯಮ ಸ್ಪಷ್ಟಪಡಿಸಿದೆ.</p>.<p>ಆದರೆ, ಲೇಖನ ಬರೆಯುವುದು, ಆಕಾಶವಾಣಿ, ದೂರದರ್ಶನ ಮತ್ತು ಚಲನಚಿತ್ರಗಳು ಪಾತ್ರವಹಿಸುವುದು ವಾಣಿಜ್ಯ ಲಾಭ ಮಾಡುವ ಸ್ವರೂಪದ್ದಾಗಿದ್ದರೆ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.</p>.<p><strong>ಇತರ ಪ್ರಮುಖ ಅಂಶಗಳು:</strong></p>.<p>* ಸರ್ಕಾರಿ ನೌಕರರು ವರದಕ್ಷಿಣೆ ತೆಗೆದುಕೊಳ್ಳುವಂತಿಲ್ಲ, ಪತಿ ಅಥವಾ ಪತ್ನಿ ಇದ್ದಲ್ಲಿ ಮತ್ತೊಂದು ಮದುವೆ ಆಗುವಂತಿಲ್ಲ.</p>.<p>* ಸರ್ಕಾರಕ್ಕೆ ಸಂಪೂರ್ಣ ನಿಷ್ಠೆ ಹೊಂದಿರಬೇಕು. ರಾಜಕೀಯವಾಗಿ ತಟಸ್ಥವಾಗಿರಬೇಕು. ಮತ್ತು ಸಾರ್ವಜನಿಕರೊಂದಿಗೆ ವಿಧೇಯರಾಗಿ ನಡೆದುಕೊಳ್ಳಬೇಕು.</p>.<p>* ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕೀಯ ಪಕ್ಷಗಳಿಗೆ ಸಂಬಂಧ ಹೊಂದಿದ ಯಾವುದೇ ಸಂಘ ಸಂಸ್ಥೆಗಳ ಸದಸ್ಯರಾಗಿರಬಾರದು. ಅವುಗಳ ಜತೆ ಸಂಬಂಧ ಹೊಂದಿರಬಾರದು.</p>.<p>* ರಾಜಕೀಯ ಚಳವಳಿ ಅಥವಾ ಚಟುವಟಿಕೆಗಳಲ್ಲಿ ಭಾಗವಹಿಸಬಾರದು. ಅವುಗಳಿಗೆ ವಂತಿಗೆ ಸಂಗ್ರಹಿಸಬಾರದು ಮತ್ತು ಕೊಡಬಾರದು.</p>.<p>* ಕಾನೂನು ಬದ್ಧ ಸರ್ಕಾರವನ್ನು ಉರುಳಿಸುವ ಪ್ರತ್ಯಕ್ಷ ಅಥವಾ ಪರೋಕ್ಷ ಚಳವಳಿಗಳಲ್ಲಿ ಭಾಗವಹಿಸಬಾರದು. ನೌಕರರ ಕುಟುಂಬದ ಸದಸ್ಯರೂ ಭಾಗವಹಿಸಬಾರದು.</p>.<p>* ರಾಜಕೀಯ ಪಕ್ಷಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಬಾರದು. ರಾಜ್ಯ ಅಥವಾ ರಾಷ್ಟ್ರ ಮಟ್ಟದಲ್ಲಿ ಕ್ರೀಡಾ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಬಾರದು.</p>.<p>* ಧಾರ್ಮಿಕ, ಜನಾಂಗೀಯ, ಭಾಷಿಕ, ಪ್ರಾದೇಶಿಕ, ಕೋಮು ಭಾವನೆ ಮತ್ತು ದ್ವೇಷಕ್ಕೆ ಕಾರಣವಾಗುವ ಸಂಘ ಸಂಸ್ಥೆಗಳಲ್ಲಿ ಭಾಗವಹಿಸುವಂತಿಲ್ಲ.</p>.<p>*ದೇಶದ ಸಾರ್ವಭೌಮತ್ವ, ಅಖಂಡತೆ, ಭದ್ರತೆ, ವಿದೇಶಿ ರಾಷ್ಟ್ರಗಳ ಸಂಬಂಧ ಹದಗೆಡಿಸುವ ಉದ್ದೇಶದ ಪ್ರತಿಭಟನೆ, ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸುವಂತಿಲ್ಲ.</p>.<p>* ಪೂರ್ವಾನುಮತಿ ಇಲ್ಲದೆ ನೌಕರರು ಪ್ರಶಸ್ತಿ ಪತ್ರ ಸ್ವೀಕರಿಸುವಂತಿಲ್ಲ</p>.<p>* ಅಪ್ರಾಪ್ತ ಮಕ್ಕಳನ್ನು ಮನೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಂತಿಲ್ಲ.</p>.<p>* ವಿದೇಶಗಳಲ್ಲಿ ತನ್ನ ಅಥವಾ ಕುಟುಂಬದ ಹೆಸರಿನಲ್ಲಿ ಆಸ್ತಿಯನ್ನು ಹೊಂದುವಂತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಲೇಖನಗಳನ್ನು ಬರೆಯಬಹುದು, ಪುಸ್ತಕಗಳನ್ನು ಪ್ರಕಟಿಸಬಹುದು, ದೂರದರ್ಶನ ಮತ್ತು ಸಿನಿಮಾಗಳಲ್ಲಿ ನಟನೆ ಮಾಡಬಹುದು!</p>.<p>ಆದರೆ, ಈ ಚಟುವಟಿಕೆಗಳು ವಾಣಿಜ್ಯ ಲಾಭದ ಉದ್ದೇಶ ಹೊಂದಿರಬಾರದು. ಕೇವಲ ಕಲಾತ್ಮಕ, ಸಾಹಿತ್ಯಕ, ವೈಜ್ಞಾನಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸ್ವರೂಪದ್ದಾಗಿರಬೇಕು. ಸರ್ಕಾರಿ ಕರ್ತವ್ಯಕ್ಕೆ ಚ್ಯುತಿ ತರುವಂತಿರಬಾರದು.</p>.<p>ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿರುವ ‘ಕರ್ನಾಟಕ ನಾಗರಿಕ ಸೇವಾ (ನಡತೆ) 2020’ ತಿದ್ದುಪಡಿ ನಿಯಮಾವಳಿಯ ಪ್ರಮುಖ ಅಂಶವಿದು. ಈ ಹಿಂದೆ ಇದ್ದ ಕಠಿಣ ನಿಯಮಗಳನ್ನು ಕೊಂಚ ಸಡಿಲಿಸಲಾಗಿದೆ. ಇದಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.</p>.<p>ಸಾಹಿತ್ಯಿಕ, ಕಲಾತ್ಮಕ ಮತ್ತು ವೈಜ್ಞಾನಿಕ ಸ್ವರೂಪದ ಪುಸ್ತಕಗಳನ್ನು ಪ್ರಕಾಶಕರ ಮೂಲಕ ಪ್ರಕಟಿಸಬಹುದು. ಕಲಾತ್ಮಕ ಮತ್ತು ವೈಜ್ಞಾನಿಕ ಸ್ವರೂಪ ಹೊಂದಿರುವ ಲೇಖನ ಬರೆಯಬಹುದು. ಇದಕ್ಕೆ ಸಂಬಂಧಿಸಿದ ಪ್ರಾಧಿಕಾರದ ಪೂರ್ವ ಅನುಮತಿ ಪಡೆಯುವ ಅಗತ್ಯವಿಲ್ಲ, ಸಾಂದರ್ಭಿಕವಾಗಿ ತೊಡಗಿಸಿಕೊಳ್ಳಬಹುದು ಎಂದು ನಿಯಮ ಸ್ಪಷ್ಟಪಡಿಸಿದೆ.</p>.<p>ಆದರೆ, ಲೇಖನ ಬರೆಯುವುದು, ಆಕಾಶವಾಣಿ, ದೂರದರ್ಶನ ಮತ್ತು ಚಲನಚಿತ್ರಗಳು ಪಾತ್ರವಹಿಸುವುದು ವಾಣಿಜ್ಯ ಲಾಭ ಮಾಡುವ ಸ್ವರೂಪದ್ದಾಗಿದ್ದರೆ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.</p>.<p><strong>ಇತರ ಪ್ರಮುಖ ಅಂಶಗಳು:</strong></p>.<p>* ಸರ್ಕಾರಿ ನೌಕರರು ವರದಕ್ಷಿಣೆ ತೆಗೆದುಕೊಳ್ಳುವಂತಿಲ್ಲ, ಪತಿ ಅಥವಾ ಪತ್ನಿ ಇದ್ದಲ್ಲಿ ಮತ್ತೊಂದು ಮದುವೆ ಆಗುವಂತಿಲ್ಲ.</p>.<p>* ಸರ್ಕಾರಕ್ಕೆ ಸಂಪೂರ್ಣ ನಿಷ್ಠೆ ಹೊಂದಿರಬೇಕು. ರಾಜಕೀಯವಾಗಿ ತಟಸ್ಥವಾಗಿರಬೇಕು. ಮತ್ತು ಸಾರ್ವಜನಿಕರೊಂದಿಗೆ ವಿಧೇಯರಾಗಿ ನಡೆದುಕೊಳ್ಳಬೇಕು.</p>.<p>* ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕೀಯ ಪಕ್ಷಗಳಿಗೆ ಸಂಬಂಧ ಹೊಂದಿದ ಯಾವುದೇ ಸಂಘ ಸಂಸ್ಥೆಗಳ ಸದಸ್ಯರಾಗಿರಬಾರದು. ಅವುಗಳ ಜತೆ ಸಂಬಂಧ ಹೊಂದಿರಬಾರದು.</p>.<p>* ರಾಜಕೀಯ ಚಳವಳಿ ಅಥವಾ ಚಟುವಟಿಕೆಗಳಲ್ಲಿ ಭಾಗವಹಿಸಬಾರದು. ಅವುಗಳಿಗೆ ವಂತಿಗೆ ಸಂಗ್ರಹಿಸಬಾರದು ಮತ್ತು ಕೊಡಬಾರದು.</p>.<p>* ಕಾನೂನು ಬದ್ಧ ಸರ್ಕಾರವನ್ನು ಉರುಳಿಸುವ ಪ್ರತ್ಯಕ್ಷ ಅಥವಾ ಪರೋಕ್ಷ ಚಳವಳಿಗಳಲ್ಲಿ ಭಾಗವಹಿಸಬಾರದು. ನೌಕರರ ಕುಟುಂಬದ ಸದಸ್ಯರೂ ಭಾಗವಹಿಸಬಾರದು.</p>.<p>* ರಾಜಕೀಯ ಪಕ್ಷಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಬಾರದು. ರಾಜ್ಯ ಅಥವಾ ರಾಷ್ಟ್ರ ಮಟ್ಟದಲ್ಲಿ ಕ್ರೀಡಾ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಬಾರದು.</p>.<p>* ಧಾರ್ಮಿಕ, ಜನಾಂಗೀಯ, ಭಾಷಿಕ, ಪ್ರಾದೇಶಿಕ, ಕೋಮು ಭಾವನೆ ಮತ್ತು ದ್ವೇಷಕ್ಕೆ ಕಾರಣವಾಗುವ ಸಂಘ ಸಂಸ್ಥೆಗಳಲ್ಲಿ ಭಾಗವಹಿಸುವಂತಿಲ್ಲ.</p>.<p>*ದೇಶದ ಸಾರ್ವಭೌಮತ್ವ, ಅಖಂಡತೆ, ಭದ್ರತೆ, ವಿದೇಶಿ ರಾಷ್ಟ್ರಗಳ ಸಂಬಂಧ ಹದಗೆಡಿಸುವ ಉದ್ದೇಶದ ಪ್ರತಿಭಟನೆ, ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸುವಂತಿಲ್ಲ.</p>.<p>* ಪೂರ್ವಾನುಮತಿ ಇಲ್ಲದೆ ನೌಕರರು ಪ್ರಶಸ್ತಿ ಪತ್ರ ಸ್ವೀಕರಿಸುವಂತಿಲ್ಲ</p>.<p>* ಅಪ್ರಾಪ್ತ ಮಕ್ಕಳನ್ನು ಮನೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಂತಿಲ್ಲ.</p>.<p>* ವಿದೇಶಗಳಲ್ಲಿ ತನ್ನ ಅಥವಾ ಕುಟುಂಬದ ಹೆಸರಿನಲ್ಲಿ ಆಸ್ತಿಯನ್ನು ಹೊಂದುವಂತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>