<p><strong>ನವದೆಹಲಿ</strong>: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶಿಕ್ಷಕರ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯವು ಕರ್ನಾಟಕ ನಾಗರಿಕ ಸೇವಾ ನಿಯಮಗಳು– 2001ಕ್ಕೆ ಬದ್ಧವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. </p>.<p>ವಿಶ್ವವಿದ್ಯಾನಿಲಯಗಳಲ್ಲಿ ಶಿಕ್ಷಕರ ಹುದ್ದೆಯ ನೇಮಕಾತಿಗೆ ವಿವಿ ಕಾಯ್ದೆಯ ಸೆಕ್ಷನ್ 53 ಅಂತಿಮ ಎಂಬ ವಕೀಲರ ವಾದವನ್ನು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅರವಿಂದ್ ಕುಮಾರ್ ಅವರ ಪೀಠ ತಿರಸ್ಕರಿಸಿದೆ. </p>.<p>ಬೆಂಗಳೂರು ವಿಶ್ವವಿದ್ಯಾಲಯದ ಆಂಗ್ಲ ವಿಭಾಗಕ್ಕೆ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ತಮ್ಮ ನೇಮಕಾತಿಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಚೈತ್ರಾ ನಾಗಮ್ಮನವರ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ. </p>.<p>ಆದಾಗ್ಯೂ, ವಿಶ್ವವಿದ್ಯಾಲಯವು 2001ರ ನಿಯಮಗಳನ್ನು ಅನುಸರಿಸಿಲ್ಲ. ಇದು ತಪ್ಪು. ಅರ್ಜಿದಾರರು 2019ರಿಂದ ಹುದ್ದೆಯಲ್ಲಿ ಇದ್ದಾರೆ. ಹೀಗಾಗಿ, ಅರ್ಜಿದಾರರಿಗೆ ಸೂಪರ್ ನ್ಯೂಮರರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ವಿಶ್ವವಿದ್ಯಾಲಯಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶಿಕ್ಷಕರ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯವು ಕರ್ನಾಟಕ ನಾಗರಿಕ ಸೇವಾ ನಿಯಮಗಳು– 2001ಕ್ಕೆ ಬದ್ಧವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. </p>.<p>ವಿಶ್ವವಿದ್ಯಾನಿಲಯಗಳಲ್ಲಿ ಶಿಕ್ಷಕರ ಹುದ್ದೆಯ ನೇಮಕಾತಿಗೆ ವಿವಿ ಕಾಯ್ದೆಯ ಸೆಕ್ಷನ್ 53 ಅಂತಿಮ ಎಂಬ ವಕೀಲರ ವಾದವನ್ನು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅರವಿಂದ್ ಕುಮಾರ್ ಅವರ ಪೀಠ ತಿರಸ್ಕರಿಸಿದೆ. </p>.<p>ಬೆಂಗಳೂರು ವಿಶ್ವವಿದ್ಯಾಲಯದ ಆಂಗ್ಲ ವಿಭಾಗಕ್ಕೆ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ತಮ್ಮ ನೇಮಕಾತಿಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಚೈತ್ರಾ ನಾಗಮ್ಮನವರ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ. </p>.<p>ಆದಾಗ್ಯೂ, ವಿಶ್ವವಿದ್ಯಾಲಯವು 2001ರ ನಿಯಮಗಳನ್ನು ಅನುಸರಿಸಿಲ್ಲ. ಇದು ತಪ್ಪು. ಅರ್ಜಿದಾರರು 2019ರಿಂದ ಹುದ್ದೆಯಲ್ಲಿ ಇದ್ದಾರೆ. ಹೀಗಾಗಿ, ಅರ್ಜಿದಾರರಿಗೆ ಸೂಪರ್ ನ್ಯೂಮರರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ವಿಶ್ವವಿದ್ಯಾಲಯಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>