<p><strong>ಬೆಂಗಳೂರು</strong>: ‘ನೂತನ ಪಾಲಿಕೆಗಳ ಆಯುಕ್ತರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ನಗರವನ್ನು ಸ್ವಚ್ಛವಾಗಿಡಲು ಗುರಿ ನೀಡಿದ್ದೇನೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ವಿಧಾನಸೌಧದಲ್ಲಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಸ ಎಲ್ಲೆಂದರಲ್ಲಿ ಹಾಕುತ್ತಿದ್ದಾರೆ. ವಾಹನಗಳಲ್ಲಿ ಬಂದು ಕಸ ಎಸೆದು ಹೋಗುತ್ತಿದ್ದಾರೆ. ರಸ್ತೆಯಲ್ಲಿ ಕಸ ಬಿಸಾಡಿ ಹೋಗುವವರನ್ನು ಗುರುತಿಸಲು ಸೂಚನೆ ನೀಡಿದ್ದೇನೆ’ ಎಂದರು.</p>.<p>‘ಎಲ್ಲ ಗುಂಡಿಗಳನ್ನು ಮುಚ್ಚಲು ಸೂಚನೆ ಕೊಟ್ಡಿದ್ದೇನೆ. ಯಾವಾಗ ಮುಚ್ಚುತ್ತೀರೆಂದು ಲಿಖಿತವಾಗಿ ಕೊಡಬೇಕು ಎಂದೂ ನಿರ್ದೇಶನ ನೀಡಿದ್ದೇನೆ. ಅಲ್ಲದೆ, ಆಯುಕ್ತರು ಬೆಳಿಗ್ಗೆ ಎಲ್ಲೆಲ್ಲಿ ರೌಂಡ್ಸ್ ಹೋಗುತ್ತಾರೆಂದು ಮಾಹಿತಿ ನೀಡಲು ಸೂಚಿಸಿದ್ದೇನೆ’ ಎಂದರು.</p>.<p>ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಶಾಸಕ ರಿಜ್ವಾನ್ ಅರ್ಷದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಪಾಲಿಕೆಗಳ ಆಯುಕ್ತರು, ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನೂತನ ಪಾಲಿಕೆಗಳ ಆಯುಕ್ತರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ನಗರವನ್ನು ಸ್ವಚ್ಛವಾಗಿಡಲು ಗುರಿ ನೀಡಿದ್ದೇನೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ವಿಧಾನಸೌಧದಲ್ಲಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಸ ಎಲ್ಲೆಂದರಲ್ಲಿ ಹಾಕುತ್ತಿದ್ದಾರೆ. ವಾಹನಗಳಲ್ಲಿ ಬಂದು ಕಸ ಎಸೆದು ಹೋಗುತ್ತಿದ್ದಾರೆ. ರಸ್ತೆಯಲ್ಲಿ ಕಸ ಬಿಸಾಡಿ ಹೋಗುವವರನ್ನು ಗುರುತಿಸಲು ಸೂಚನೆ ನೀಡಿದ್ದೇನೆ’ ಎಂದರು.</p>.<p>‘ಎಲ್ಲ ಗುಂಡಿಗಳನ್ನು ಮುಚ್ಚಲು ಸೂಚನೆ ಕೊಟ್ಡಿದ್ದೇನೆ. ಯಾವಾಗ ಮುಚ್ಚುತ್ತೀರೆಂದು ಲಿಖಿತವಾಗಿ ಕೊಡಬೇಕು ಎಂದೂ ನಿರ್ದೇಶನ ನೀಡಿದ್ದೇನೆ. ಅಲ್ಲದೆ, ಆಯುಕ್ತರು ಬೆಳಿಗ್ಗೆ ಎಲ್ಲೆಲ್ಲಿ ರೌಂಡ್ಸ್ ಹೋಗುತ್ತಾರೆಂದು ಮಾಹಿತಿ ನೀಡಲು ಸೂಚಿಸಿದ್ದೇನೆ’ ಎಂದರು.</p>.<p>ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಶಾಸಕ ರಿಜ್ವಾನ್ ಅರ್ಷದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಪಾಲಿಕೆಗಳ ಆಯುಕ್ತರು, ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>