<p><strong>ಯಾದಗಿರಿ</strong>: ‘ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿದ್ಯಾರ್ಥಿಗಳಬೌದ್ಧಿಕ ಮಟ್ಟ ಹೆಚ್ಚಿ, ನೈತಿಕತೆ ಬೆಳೆಯುತ್ತದೆ. ಗುಜರಾತ್ ರಾಜ್ಯದಂತೆ ನಮ್ಮಲ್ಲಿಯೂ ಭಗವದ್ಗೀತೆ ಬೋಧಿಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.</p>.<p>‘ಗುಜರಾತ್ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ ಅನುಕೂಲವಾಗಲಿದೆ.ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವರಲ್ಲಿ ನೈತಿಕತೆ ಬೆಳೆಸುವ ಅಗತ್ಯವಿದೆ. ಹೀಗಾಗಿಯೇ ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಉಂಟು ಮಾಡಬಾರದು’ ಎಂದುಸುರಪುರ ತಾಲ್ಲೂಕಿನ ದೇವತ್ಕಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.</p>.<p>‘ಕರ್ನಾಟಕದ ಶಾಲಾ ಪಠ್ಯದಲ್ಲಿಯೂ ಭಗವದ್ಗೀತೆ ಅಳವಡಿಸಲು ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇಲಾಖೆ ಮೊದಲು ವರದಿ ನೀಡಲಿ. ನಾನು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ’ ಎಂದ ಅವರು, ‘ಮಕ್ಕಳವ್ಯಕ್ತಿತ್ವ ವಿಕಸನವೇ ಸರ್ಕಾರದ ಮುಖ್ಯ ಗುರಿ. ಆ ನಿಟ್ಟಿಯಲ್ಲಿ ಸೂಕ್ತ ಹೆಜ್ಜೆ ಇಡುತ್ತೇವೆ’ ಎಂದರು.</p>.<p>‘ಭಗವದ್ಗೀತೆ ಅಳವಡಿಸಿದರೆ ಮಾತ್ರ ಮಕ್ಕಳಲ್ಲಿ ನೈತಿಕೆ ಬೆಳೆಯುತ್ತದೆಯೇ? ಈಗ ನೈತಿಕ ಶಿಕ್ಷಣ ಸಿಗುತ್ತಿಲ್ಲವೇ’ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗರಂ ಆದ ಪ್ರಸಂಗ ನಡೆಯಿತು.</p>.<p><strong>₹1,024 ಕೋಟಿ ಮೊತ್ತದ ಕಾಮಗಾರಿಗೆ ಚಾಲನೆ<br />ಯಾದಗಿರಿ: </strong>ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ ₹1,024 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವ 78 ಕಾಮಗಾರಿಗಳಿಗೆ ಶಂಕುಸ್ಥಾಪನೆ, ₹ 36 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 24 ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ನೆರವೇರಿಸಿದರು.ಕಂದಾಯ ಸಚಿವ ಆರ್.ಅಶೋಕ ದೇವತ್ಕಲ್ನಲ್ಲಿ ಗ್ರಾಮ ವಾಸ್ತವ್ಯಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿದ್ಯಾರ್ಥಿಗಳಬೌದ್ಧಿಕ ಮಟ್ಟ ಹೆಚ್ಚಿ, ನೈತಿಕತೆ ಬೆಳೆಯುತ್ತದೆ. ಗುಜರಾತ್ ರಾಜ್ಯದಂತೆ ನಮ್ಮಲ್ಲಿಯೂ ಭಗವದ್ಗೀತೆ ಬೋಧಿಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.</p>.<p>‘ಗುಜರಾತ್ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ ಅನುಕೂಲವಾಗಲಿದೆ.ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವರಲ್ಲಿ ನೈತಿಕತೆ ಬೆಳೆಸುವ ಅಗತ್ಯವಿದೆ. ಹೀಗಾಗಿಯೇ ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಉಂಟು ಮಾಡಬಾರದು’ ಎಂದುಸುರಪುರ ತಾಲ್ಲೂಕಿನ ದೇವತ್ಕಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.</p>.<p>‘ಕರ್ನಾಟಕದ ಶಾಲಾ ಪಠ್ಯದಲ್ಲಿಯೂ ಭಗವದ್ಗೀತೆ ಅಳವಡಿಸಲು ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇಲಾಖೆ ಮೊದಲು ವರದಿ ನೀಡಲಿ. ನಾನು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ’ ಎಂದ ಅವರು, ‘ಮಕ್ಕಳವ್ಯಕ್ತಿತ್ವ ವಿಕಸನವೇ ಸರ್ಕಾರದ ಮುಖ್ಯ ಗುರಿ. ಆ ನಿಟ್ಟಿಯಲ್ಲಿ ಸೂಕ್ತ ಹೆಜ್ಜೆ ಇಡುತ್ತೇವೆ’ ಎಂದರು.</p>.<p>‘ಭಗವದ್ಗೀತೆ ಅಳವಡಿಸಿದರೆ ಮಾತ್ರ ಮಕ್ಕಳಲ್ಲಿ ನೈತಿಕೆ ಬೆಳೆಯುತ್ತದೆಯೇ? ಈಗ ನೈತಿಕ ಶಿಕ್ಷಣ ಸಿಗುತ್ತಿಲ್ಲವೇ’ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗರಂ ಆದ ಪ್ರಸಂಗ ನಡೆಯಿತು.</p>.<p><strong>₹1,024 ಕೋಟಿ ಮೊತ್ತದ ಕಾಮಗಾರಿಗೆ ಚಾಲನೆ<br />ಯಾದಗಿರಿ: </strong>ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ ₹1,024 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವ 78 ಕಾಮಗಾರಿಗಳಿಗೆ ಶಂಕುಸ್ಥಾಪನೆ, ₹ 36 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 24 ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ನೆರವೇರಿಸಿದರು.ಕಂದಾಯ ಸಚಿವ ಆರ್.ಅಶೋಕ ದೇವತ್ಕಲ್ನಲ್ಲಿ ಗ್ರಾಮ ವಾಸ್ತವ್ಯಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>