'ಗುಜರಾತ್ ಚುನಾವಣೆಯ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲ ತಯಾರಿಯನ್ನೂ ನಡೆಸುತ್ತಿದ್ದೇವೆ. ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲ ತಯಾರಿ ನಡೆಸಿದ್ದೇವೆ' ಎಂದು ತಿಳಿಸಿದರು.