ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ನಡೆಸುತ್ತಿರುವ ‘ಜನಸಂಕಲ್ಪ ಯಾತ್ರೆ’ ಮಧ್ಯೆಯೇ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು, ಅಧಿಕಾರಿಗಳ ಕಾರ್ಯವೈಖರಿಯನ್ನು ಒರೆಗೆ ಹಚ್ಚಿದರು. ಅಧಿಕಾರಿಗಳು ಅಪೇಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸದೇ ಇರುವ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದೂ ಅಲ್ಲದೇ, ಕೆಲಸ ಮಾಡದಿದ್ದರೆ ಎತ್ತಂಗಡಿಯ ಎಚ್ಚರಿಕೆಯನ್ನೂ ನೀಡಿದರು.