<p><strong>ಹೊಸದುರ್ಗ</strong>: ‘ಅಂತರರಾಜ್ಯ ಜಲ ವಿವಾದ ಕಾಯ್ದೆ ಅಪ್ರಸ್ತುತವಾಗಿದೆ. ಇದು ಸಮಸ್ಯೆ ಇತ್ಯರ್ಥಪಡಿಸುವ ಬದಲು ಹಲವು ಪ್ರಕರಣಗಳಿಗೆ ಕಾರಣವಾಗಿದೆ. ನ್ಯಾಯಾಧೀಕರಣ ರಚನೆ ಮಾಡಿ ಜಲವಿವಾದವನ್ನು ಇನ್ನಷ್ಟು ಕಗ್ಗಂಟು ಮಾಡಲಾಗುತ್ತಿದೆ’ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.</p>.<p>ನ್ಯಾಯಾಂಗ ಇಲಾಖೆ ಹಾಗೂ ವಕೀಲರ ಸಂಘದಿಂದ ಶನಿವಾರ ಏರ್ಪಡಿಸಿದ್ದ ಹೊಸದುರ್ಗ ನ್ಯಾಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕಾಲ ಬದಲಾದಂತೆ ಹಲವು ಕಾನೂನುಗಳು ಅಪ್ರಸ್ತುತವಾಗಿವೆ. ಇಂತಹ ಕಾನೂನುಗಳನ್ನು ಗುರುತಿಸಿ ಬದಲಾವಣೆ ತರುವ ಅಗತ್ಯವಿದೆ. ಕ್ಲಿಷ್ಟಕರ ವ್ಯವಸ್ಥೆಯ ನಡುವೆ ನ್ಯಾಯಾಂಗದ ಮೇಲೆ ಜನರಿಗೆ ನಂಬಿಕೆ ಇದೆ. ಈ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಕಾನೂನುಗಳಲ್ಲಿ ಬದಲಾವಣೆ ಆಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ‘ಅಂತರರಾಜ್ಯ ಜಲ ವಿವಾದ ಕಾಯ್ದೆ ಅಪ್ರಸ್ತುತವಾಗಿದೆ. ಇದು ಸಮಸ್ಯೆ ಇತ್ಯರ್ಥಪಡಿಸುವ ಬದಲು ಹಲವು ಪ್ರಕರಣಗಳಿಗೆ ಕಾರಣವಾಗಿದೆ. ನ್ಯಾಯಾಧೀಕರಣ ರಚನೆ ಮಾಡಿ ಜಲವಿವಾದವನ್ನು ಇನ್ನಷ್ಟು ಕಗ್ಗಂಟು ಮಾಡಲಾಗುತ್ತಿದೆ’ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.</p>.<p>ನ್ಯಾಯಾಂಗ ಇಲಾಖೆ ಹಾಗೂ ವಕೀಲರ ಸಂಘದಿಂದ ಶನಿವಾರ ಏರ್ಪಡಿಸಿದ್ದ ಹೊಸದುರ್ಗ ನ್ಯಾಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕಾಲ ಬದಲಾದಂತೆ ಹಲವು ಕಾನೂನುಗಳು ಅಪ್ರಸ್ತುತವಾಗಿವೆ. ಇಂತಹ ಕಾನೂನುಗಳನ್ನು ಗುರುತಿಸಿ ಬದಲಾವಣೆ ತರುವ ಅಗತ್ಯವಿದೆ. ಕ್ಲಿಷ್ಟಕರ ವ್ಯವಸ್ಥೆಯ ನಡುವೆ ನ್ಯಾಯಾಂಗದ ಮೇಲೆ ಜನರಿಗೆ ನಂಬಿಕೆ ಇದೆ. ಈ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಕಾನೂನುಗಳಲ್ಲಿ ಬದಲಾವಣೆ ಆಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>