ಶಾಸಕ ಆರ್.ಮಂಜುನಾಥ್, ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಮಾತನಾಡಿದರು. ಕಾನ್ಶಿರಾಮ್ನಗರ ಮತ್ತು ಲಕ್ಷ್ಮೀಪುರದ 50 ಅಡ್ಡರೆಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ಕಾವೇರಿ ನೀರಿನ ಸೌಕರ್ಯ, ಸರ್ಕಾರಿ ಆಸ್ಪತ್ರೆ, ಪದವಿ ಕಾಲೇಜು, ಬಸ್ ನಿಲ್ದಾಣ, ವಲಸೆ ಕಾರ್ಮಿಕರಿಗೆ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣ ಸೇರಿ ಬಡಾವಣೆ ಅಭಿವೃದ್ಧಿಗೆ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗೆ ಮುಖಂಡರು ಮನವಿ ಸಲ್ಲಿಸಿದರು.