<p><strong>ನವದೆಹಲಿ:</strong> ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಹಣಕಾಸಿನ ನೆರವು ನೀಡುವಂತೆ ರಾಜ್ಯ ಸರ್ಕಾರ ಬುಧವಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ.</p>.<p>ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬೆಳಿಗ್ಗೆ ಭೇಟಿ ಮಾಡಿ ರಾಜ್ಯದ ಕೆಲವು ಮಹತ್ವದ ಯೋಜನೆಗಳ ಸಾಕಾರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.</p>.<p>ರಾಷ್ಟ್ರೀಯ ಯೋಜನೆ ಎಂದು ಘೋಷಿತವಾಗಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಅಂದಾಜು ₹ 23,000 ಕೋಟಿ ವೆಚ್ಚ ತಗುಲಲಿದೆ. ಕೇಂದ್ರದ ಪಾಲನ್ನು ಕೂಡಲೇ ಬಿಡುಗಡೆ ಮಾಡಲು ಕೇಂದ್ರ ಸಚಿವರನ್ನು ಕೋರಲಾಗಿದೆ ಎಂದು ಭೇಟಿಯ ನಂತರ ಬೊಮ್ಮಾಯಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p class="Subhead"><strong>ಕೋಲಾರ ಜಿಲ್ಲೆಯಲ್ಲಿ 75 ಕೆರೆ:</strong>ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಪ್ರತಿ ಜಿಲ್ಲೆಯಲ್ಲಿ 75 ಕೆರೆಗಳನ್ನು ನಿರ್ಮಿಸಲು ಪ್ರಧಾನಿ ಕರೆ ನೀಡಿದ್ದಾರೆ. ಅವರ ಆಶಯದಂತೆ ಕೆರೆಗಳನ್ನು ನಿರ್ಮಿಸಲು ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದು ಅವರು ಹೇಳಿದರು.</p>.<p>ಆರಂಭಿಕ ಹಂತದಲ್ಲಿ ಬರಪೀಡಿತ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ನಂತರ ಹಂತಹಂತವಾಗಿ ವಿವಿಧ ಜಿಲ್ಲೆಗಳಲ್ಲಿ ಕೆರೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು.</p>.<p class="Subhead"><strong>ರಾಯಚೂರಿನಲ್ಲಿ ಸಮ್ಮೇಳನ: </strong>ಅಂತರರಾಷ್ಟ್ರೀಯ ಸಿರಿಧಾನ್ಯ ದಿನಾಚರಣೆ ಅಂಗವಾಗಿ ರಾಜ್ಯದ ಸಿರಿ ಧಾನ್ಯ ಬೆಳೆಗಾರರನ್ನು ಪ್ರೋತ್ಸಾಹಿಸಲು ರಾಯಚೂರಿನಲ್ಲಿ ಸಮ್ಮೇಳನಕ್ಕೆ ನಿರ್ಧರಿಸಲಾಗಿದೆ ಎಂದರು. ಸಚಿವರಾದ ಗೋವಿಂದ ಕಾರಜೋಳ, ವಿ.ಸುನೀಲ್<br />ಕುಮಾರ್ ಹಾಜರಿದ್ದರು. ಇದಕ್ಕೂ ಮೊದಲು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಅವರು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಹಣಕಾಸಿನ ನೆರವು ನೀಡುವಂತೆ ರಾಜ್ಯ ಸರ್ಕಾರ ಬುಧವಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ.</p>.<p>ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬೆಳಿಗ್ಗೆ ಭೇಟಿ ಮಾಡಿ ರಾಜ್ಯದ ಕೆಲವು ಮಹತ್ವದ ಯೋಜನೆಗಳ ಸಾಕಾರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.</p>.<p>ರಾಷ್ಟ್ರೀಯ ಯೋಜನೆ ಎಂದು ಘೋಷಿತವಾಗಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಅಂದಾಜು ₹ 23,000 ಕೋಟಿ ವೆಚ್ಚ ತಗುಲಲಿದೆ. ಕೇಂದ್ರದ ಪಾಲನ್ನು ಕೂಡಲೇ ಬಿಡುಗಡೆ ಮಾಡಲು ಕೇಂದ್ರ ಸಚಿವರನ್ನು ಕೋರಲಾಗಿದೆ ಎಂದು ಭೇಟಿಯ ನಂತರ ಬೊಮ್ಮಾಯಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p class="Subhead"><strong>ಕೋಲಾರ ಜಿಲ್ಲೆಯಲ್ಲಿ 75 ಕೆರೆ:</strong>ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಪ್ರತಿ ಜಿಲ್ಲೆಯಲ್ಲಿ 75 ಕೆರೆಗಳನ್ನು ನಿರ್ಮಿಸಲು ಪ್ರಧಾನಿ ಕರೆ ನೀಡಿದ್ದಾರೆ. ಅವರ ಆಶಯದಂತೆ ಕೆರೆಗಳನ್ನು ನಿರ್ಮಿಸಲು ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದು ಅವರು ಹೇಳಿದರು.</p>.<p>ಆರಂಭಿಕ ಹಂತದಲ್ಲಿ ಬರಪೀಡಿತ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ನಂತರ ಹಂತಹಂತವಾಗಿ ವಿವಿಧ ಜಿಲ್ಲೆಗಳಲ್ಲಿ ಕೆರೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು.</p>.<p class="Subhead"><strong>ರಾಯಚೂರಿನಲ್ಲಿ ಸಮ್ಮೇಳನ: </strong>ಅಂತರರಾಷ್ಟ್ರೀಯ ಸಿರಿಧಾನ್ಯ ದಿನಾಚರಣೆ ಅಂಗವಾಗಿ ರಾಜ್ಯದ ಸಿರಿ ಧಾನ್ಯ ಬೆಳೆಗಾರರನ್ನು ಪ್ರೋತ್ಸಾಹಿಸಲು ರಾಯಚೂರಿನಲ್ಲಿ ಸಮ್ಮೇಳನಕ್ಕೆ ನಿರ್ಧರಿಸಲಾಗಿದೆ ಎಂದರು. ಸಚಿವರಾದ ಗೋವಿಂದ ಕಾರಜೋಳ, ವಿ.ಸುನೀಲ್<br />ಕುಮಾರ್ ಹಾಜರಿದ್ದರು. ಇದಕ್ಕೂ ಮೊದಲು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಅವರು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>