ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ಕೋವಿಡ್ನಿಂದಾಗಿ ಎಲ್ಲ ಕ್ಷೇತ್ರಗಳ ಕಾರ್ಯಚಟುವಟಿಕೆಗಳು ಕುಂಠಿತಗೊಂಡಿದ್ದವು. ಸದ್ಯ ಕೊರೊನಾ ಸೋಂಕು ಪ್ರಮಾಣ ಇಳಿಮುಖವಾಗುತ್ತಿದ್ದು, ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ಪುನರಾರಂಭವಾಗುತ್ತಿವೆ. ಈ ಸಂದರ್ಭದಲ್ಲಿ ಪ್ರತಿಭಟನೆ, ಬಂದ್ ನಡೆಸಿದರೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರೈತ ಸಂಘಟನೆಗಳು ಬಂದ್ ನಡೆಸದೆ ಸಹಕಾರ ನೀಡಬೇಕು’ ಎಂದು ವಿನಂತಿಸಿದರು.