‘ಪ್ರವಾಹ ಸಂತಸ್ತರಿಗೆ ರಕ್ಷಣೆ ಮತ್ತು ತುರ್ತು ಪರಿಹಾರವನ್ನು ಸರ್ಕಾರ ನೀಡಿದೆ. ಆದರೆ, ಜನರ ಪುನರ್ವಸತಿಗೆ ಹೆಚ್ಚಿನ ನೆರವಿನ ಅಗತ್ಯವಿದೆ. ಉತ್ತರ ಕನ್ನಡ ಜಿಲ್ಲೆಯ ಹಾನಿ ಪರಿಶೀಲಿಸಿ ₹ 100 ಕೋಟಿ ತಕ್ಷಣ ಬಿಡುಗಡೆ ಮಾಡಿದ್ದು, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ₹ 500 ಕೋಟಿ ಒದಗಿಸಲಾಗಿದೆ’ ಎಂದು ಬೊಮ್ಮಾಯಿ ಹೇಳಿದರು.