ಕಲಬುರಗಿ ಜಿಲ್ಲೆ ಕಮಲಾಪುರ ತಾಲ್ಲೂಕಿನ ಮಹಾಗಾಂವನಲ್ಲಿ ಬುಧವಾರ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು, ಕಲಬುರಗಿ ಸೇರಿ ರಾಜ್ಯದ ಹಲವೆಡೆ ವಕ್ಫ್ ಆಸ್ತಿಯನ್ನು ಕಾಂಗ್ರೆಸ್ ನಾಯಕರು ತಮ್ಮ ಹಾಗೂ ತಮ್ಮ ಸಹೋದರರ ಹೆಸರಿಗೆ ಮಾಡಿಕೊಂಡಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಲಾಗುವುದು’ ಎಂದರು.