‘ಮೃತ ಯುವಕ ನಾಲ್ಕನೇ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಕಳೆದ ಒಂದು ವಾರದಿಂದ ಬಂಕರ್ನಲ್ಲಿ ಇದ್ದರು. ಇವತ್ತು ಹೊರಗೆ ಬಂದಾಗ ಶೆಲ್ ದಾಳಿಗೆ ಸಿಲುಕಿ ಮೃತಪಟ್ಟರು. ಈ ಸಂಬಂಧ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಮತ್ತು ಪ್ರಧಾನಿಯವರ ಜತೆಗೂ ಮಾತನಾಡಿದ್ದೇನೆ. ಅವರೂ ಕೂಡ ಕುಟುಂಬದ ವಿವರ ಕೇಳಿದ್ದು, ಮಾತನಾಡುವ ಸಾಧ್ಯತೆ ಇದೆ’ ಎಂದು ಹೇಳಿದರು.