<p><strong>ಬೆಂಗಳೂರು:</strong> ‘ರಾತ್ರಿ ಕರ್ಫ್ಯೂ ಮಾಡಿದ್ದರೂ ನಿರೀಕ್ಷೆಯ ಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿಲ್ಲ. ಜನರ ಸಹಕಾರ ಮುಖ್ಯ. ಲಾಕ್ಡೌನ್ ಮಾಡದೇ ಉಳಿದೆಲ್ಲ ರೀತಿಯ ಬಿಗಿ ಕ್ರಮ ಕೈಗೊಂಡು ಕೋವಿಡ್ ಹರಡುವಿಕೆ ನಿಯಂತ್ರಿಸಲು ಯತ್ನಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘17 –18ರಂದು ಅಧಿಕಾರಿಗಳು, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.<p>‘ಮುಷ್ಕರ ನಿರತ ಸಾರಿಗೆ ನೌಕರರು ಇನ್ನೂ ಒಂದು ತಿಂಗಳು ಹೋರಾಟ ನಡೆಸಿದರೂ ವೇತನ ಪರಿಷ್ಕರಣೆ ಮಾಡುವುದಿಲ್ಲ. ಕ್ರಮ ಕೈಗೊಳ್ಳುವ ಜತೆಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ’ ಎಂದರು.</p>.<p>‘ಸಾರಿಗೆ ನೌಕರರು ಯಾರದ್ದೋ ಮಾತು ಕೇಳಿಕೊಂಡು ಹಬ್ಬದ ಸಮಯದಲ್ಲಿ ಜನರಿಗೆ ತೊಂದರೆ ಕೊಟ್ಟಿರುವುದನ್ನು ಸಹಿಸಲಾಗದು. ಮಾತುಕತೆಯಾಡುವ ಪ್ರಸಂಗವೂ ಉಳಿದಿಲ್ಲ. ಎಷ್ಟು ದಿನ ಬೇಕಾದರೂ ಅವರು ಹೋರಾಟ ನಡೆಸಲಿ’ ಎಂದು ಎಚ್ಚರಿಸಿದರು.</p>.<p>ಸದ್ಯ ನಡೆಯಲಿರುವ ಎರಡು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/covid-19-india-update-161736-new-covid-19-cases-879-deaths-822050.html" target="_blank">Covid-19 India Update:1.61ಲಕ್ಷ ಹೊಸ ಪ್ರಕರಣ ವರದಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾತ್ರಿ ಕರ್ಫ್ಯೂ ಮಾಡಿದ್ದರೂ ನಿರೀಕ್ಷೆಯ ಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿಲ್ಲ. ಜನರ ಸಹಕಾರ ಮುಖ್ಯ. ಲಾಕ್ಡೌನ್ ಮಾಡದೇ ಉಳಿದೆಲ್ಲ ರೀತಿಯ ಬಿಗಿ ಕ್ರಮ ಕೈಗೊಂಡು ಕೋವಿಡ್ ಹರಡುವಿಕೆ ನಿಯಂತ್ರಿಸಲು ಯತ್ನಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘17 –18ರಂದು ಅಧಿಕಾರಿಗಳು, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.<p>‘ಮುಷ್ಕರ ನಿರತ ಸಾರಿಗೆ ನೌಕರರು ಇನ್ನೂ ಒಂದು ತಿಂಗಳು ಹೋರಾಟ ನಡೆಸಿದರೂ ವೇತನ ಪರಿಷ್ಕರಣೆ ಮಾಡುವುದಿಲ್ಲ. ಕ್ರಮ ಕೈಗೊಳ್ಳುವ ಜತೆಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ’ ಎಂದರು.</p>.<p>‘ಸಾರಿಗೆ ನೌಕರರು ಯಾರದ್ದೋ ಮಾತು ಕೇಳಿಕೊಂಡು ಹಬ್ಬದ ಸಮಯದಲ್ಲಿ ಜನರಿಗೆ ತೊಂದರೆ ಕೊಟ್ಟಿರುವುದನ್ನು ಸಹಿಸಲಾಗದು. ಮಾತುಕತೆಯಾಡುವ ಪ್ರಸಂಗವೂ ಉಳಿದಿಲ್ಲ. ಎಷ್ಟು ದಿನ ಬೇಕಾದರೂ ಅವರು ಹೋರಾಟ ನಡೆಸಲಿ’ ಎಂದು ಎಚ್ಚರಿಸಿದರು.</p>.<p>ಸದ್ಯ ನಡೆಯಲಿರುವ ಎರಡು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/covid-19-india-update-161736-new-covid-19-cases-879-deaths-822050.html" target="_blank">Covid-19 India Update:1.61ಲಕ್ಷ ಹೊಸ ಪ್ರಕರಣ ವರದಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>