<p><strong>ಹುಬ್ಬಳ್ಳಿ: </strong>ಕೆಎಸ್ಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರದ ಬಗ್ಗೆ ಬೆಂಗಳೂರಿಗೆ ಹೋಗಿ ಇಂದು (ಗುರುವಾರ) ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಬೆಳಗಾವಿಯ ಎರಡು ದಿನಗಳ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಹೋಗುವ ಮುನ್ನ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು.</p>.<p>ಖಾಸಗಿ ವಾಹನಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆಯಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ 'ಖಾಸಗಿ ವಾಹನಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿಲ್ಲ, ನಾವು ನಿಗದಿ ಮಾಡಿದ ಹಣ ಮಾತ್ರ ವಸೂಲಿ ಮಾಡುತ್ತಿದ್ದಾರೆ.</p>.<p>ಒಂದು ವೇಳೆ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕ್ರಮ ಜರುಗಿಸುತ್ತೇವೆ' ಎಂದರು.</p>.<p>ವಿಮೆ ಅವಧಿ ಮುಗಿದ ಹಾಗೂ ಪರ್ಮಿಟ್ ಸಮಯ ಮುಗಿದ ಅಸುರಕ್ಷಿತ ಖಾಸಗಿ ವಾಹನಗಳನ್ನು ಕೂಡ ಓಡಿಸಲಾಗುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಸಿಟ್ಟಾದ ಮುಖ್ಯಮಂತ್ರಿ ಸರ್ಕಾರ ನಡೆಸುವುದು ಹೇಗೆ ಎನ್ನುವುದು ನಮಗೆ ಗೊತ್ತಿದೆ. ನೀವು ಅದರ ಬಗ್ಗೆ ತಲೆ ಕೊಡಿಸಿಕೊಳ್ಳುವುದು ಬೇಡ ಎಂದರು.</p>.<p>ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಕರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ ಎಂದು ಗರಂ ಆದ ಮುಖ್ಯಮಂತ್ರಿ ಜನ ಯಾವುದೇ ಕಾರಣಕ್ಕೂ ಆತಂಕ ಪಡುವುದು ಬೇಡ ಎಂದರು.</p>.<p>ಎರಡು ದಿನ ಬೆಳಗಾವಿಯಲ್ಲಿದ್ದೆ, ಅಲ್ಲಿನ ವಾತಾವರಣ ನಮ್ಮ ಪರವಾಗಿದೆ. ಸುರೇಶ್ ಅಂಗಡಿ ಗೆದ್ದ ಅಂತರದಲ್ಲಿಯೇ ಅವರ ಶ್ರೀಮತಿಯವರು ಗೆಲ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.</p>.<p><a href="https://www.prajavani.net/district/belagavi/cm-bs-yediyurappa-angry-over-ksrtc-employees-protest-demanding-for-wage-hike-820485.html" itemprop="url">ನಾನೇಕೆ ಕರೆಯಲಿ, ಮಾತುಕತೆಗೆ ಅವರೇ ಬರಲಿ: ಸಿಎಂ ಯಡಿಯೂರಪ್ಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಕೆಎಸ್ಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರದ ಬಗ್ಗೆ ಬೆಂಗಳೂರಿಗೆ ಹೋಗಿ ಇಂದು (ಗುರುವಾರ) ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಬೆಳಗಾವಿಯ ಎರಡು ದಿನಗಳ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಹೋಗುವ ಮುನ್ನ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು.</p>.<p>ಖಾಸಗಿ ವಾಹನಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆಯಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ 'ಖಾಸಗಿ ವಾಹನಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿಲ್ಲ, ನಾವು ನಿಗದಿ ಮಾಡಿದ ಹಣ ಮಾತ್ರ ವಸೂಲಿ ಮಾಡುತ್ತಿದ್ದಾರೆ.</p>.<p>ಒಂದು ವೇಳೆ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕ್ರಮ ಜರುಗಿಸುತ್ತೇವೆ' ಎಂದರು.</p>.<p>ವಿಮೆ ಅವಧಿ ಮುಗಿದ ಹಾಗೂ ಪರ್ಮಿಟ್ ಸಮಯ ಮುಗಿದ ಅಸುರಕ್ಷಿತ ಖಾಸಗಿ ವಾಹನಗಳನ್ನು ಕೂಡ ಓಡಿಸಲಾಗುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಸಿಟ್ಟಾದ ಮುಖ್ಯಮಂತ್ರಿ ಸರ್ಕಾರ ನಡೆಸುವುದು ಹೇಗೆ ಎನ್ನುವುದು ನಮಗೆ ಗೊತ್ತಿದೆ. ನೀವು ಅದರ ಬಗ್ಗೆ ತಲೆ ಕೊಡಿಸಿಕೊಳ್ಳುವುದು ಬೇಡ ಎಂದರು.</p>.<p>ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಕರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ ಎಂದು ಗರಂ ಆದ ಮುಖ್ಯಮಂತ್ರಿ ಜನ ಯಾವುದೇ ಕಾರಣಕ್ಕೂ ಆತಂಕ ಪಡುವುದು ಬೇಡ ಎಂದರು.</p>.<p>ಎರಡು ದಿನ ಬೆಳಗಾವಿಯಲ್ಲಿದ್ದೆ, ಅಲ್ಲಿನ ವಾತಾವರಣ ನಮ್ಮ ಪರವಾಗಿದೆ. ಸುರೇಶ್ ಅಂಗಡಿ ಗೆದ್ದ ಅಂತರದಲ್ಲಿಯೇ ಅವರ ಶ್ರೀಮತಿಯವರು ಗೆಲ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.</p>.<p><a href="https://www.prajavani.net/district/belagavi/cm-bs-yediyurappa-angry-over-ksrtc-employees-protest-demanding-for-wage-hike-820485.html" itemprop="url">ನಾನೇಕೆ ಕರೆಯಲಿ, ಮಾತುಕತೆಗೆ ಅವರೇ ಬರಲಿ: ಸಿಎಂ ಯಡಿಯೂರಪ್ಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>