<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ):</strong> ‘ನೀವು (ಬಿಜೆಪಿ, ಜೆಡಿಎಸ್) ಕುರ್ಚಿಯನ್ನು ಎಷ್ಟೇ ಅಲ್ಲಾಡಿಸಿದರೂ ಜಗ್ಗುವುದಿಲ್ಲ, ಬಗ್ಗುವುದಿಲ್ಲ’ ಎಂದು ವಿರೋಧ ಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.</p><p>ಕೊಳ್ಳೇಗಾಲ ತಾಲ್ಲೂಕಿನಲ್ಲಿ ಶನಿವಾರ ಭರಚುಕ್ಕಿ ಜಲಪಾತೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ನವರು ಕುರ್ಚಿಯನ್ನು ಅಲುಗಾಡಿದಷ್ಟೂ ಗಟ್ಟಿಯಾಗಿ ಅಧಿಕಾರ ನಡೆಸಿ ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮ ರೂಪಿಸುತ್ತಲೇ ಇರುತ್ತೇನೆ ಎಂದರು.</p><p>ಹಿಂದೆ ಚಾಮರಾಜನಗರ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆ ಬಿತ್ತಲಾಗಿತ್ತು. ಮುಖ್ಯಮಂತ್ರಿಯಾದ ಬಳಿಕ ಹತ್ತಕ್ಕೂ ಹೆಚ್ವು ಬಾರಿ ಜಿಲ್ಲೆಗೆ ಬಂದಿದ್ದೇನೆ. ಚಾಮರಾಜನಗರಕ್ಕೆ ಬಂದಾಗಲೆಲ್ಲ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದರು.</p><p>ಸಿದ್ದರಾಮಯ್ಯ ಕಾಲುಗುಣದಿಂದ ರಾಜ್ಯದಲ್ಲಿ ಮಳೆ ಇಲ್ಲ ಎಂದು ದೂರಿದ್ದರು. ಈ ಬಾರಿ ಉತ್ತಮ ಮಳೆಯಾಗಿದೆ. ನನ್ನ ವಿರುದ್ಧ ಬಿತ್ತಿದ ಮೂಢನಂಬಿಕೆಯೂ ಸುಳ್ಳಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ):</strong> ‘ನೀವು (ಬಿಜೆಪಿ, ಜೆಡಿಎಸ್) ಕುರ್ಚಿಯನ್ನು ಎಷ್ಟೇ ಅಲ್ಲಾಡಿಸಿದರೂ ಜಗ್ಗುವುದಿಲ್ಲ, ಬಗ್ಗುವುದಿಲ್ಲ’ ಎಂದು ವಿರೋಧ ಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.</p><p>ಕೊಳ್ಳೇಗಾಲ ತಾಲ್ಲೂಕಿನಲ್ಲಿ ಶನಿವಾರ ಭರಚುಕ್ಕಿ ಜಲಪಾತೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ನವರು ಕುರ್ಚಿಯನ್ನು ಅಲುಗಾಡಿದಷ್ಟೂ ಗಟ್ಟಿಯಾಗಿ ಅಧಿಕಾರ ನಡೆಸಿ ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮ ರೂಪಿಸುತ್ತಲೇ ಇರುತ್ತೇನೆ ಎಂದರು.</p><p>ಹಿಂದೆ ಚಾಮರಾಜನಗರ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆ ಬಿತ್ತಲಾಗಿತ್ತು. ಮುಖ್ಯಮಂತ್ರಿಯಾದ ಬಳಿಕ ಹತ್ತಕ್ಕೂ ಹೆಚ್ವು ಬಾರಿ ಜಿಲ್ಲೆಗೆ ಬಂದಿದ್ದೇನೆ. ಚಾಮರಾಜನಗರಕ್ಕೆ ಬಂದಾಗಲೆಲ್ಲ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದರು.</p><p>ಸಿದ್ದರಾಮಯ್ಯ ಕಾಲುಗುಣದಿಂದ ರಾಜ್ಯದಲ್ಲಿ ಮಳೆ ಇಲ್ಲ ಎಂದು ದೂರಿದ್ದರು. ಈ ಬಾರಿ ಉತ್ತಮ ಮಳೆಯಾಗಿದೆ. ನನ್ನ ವಿರುದ್ಧ ಬಿತ್ತಿದ ಮೂಢನಂಬಿಕೆಯೂ ಸುಳ್ಳಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>