ಸಿದ್ದರಾಮಯ್ಯ ಮತ್ತು ಶಿವಕುಮಾರ್ ಭಾನುವಾರ ಬೆಳಿಗ್ಗೆ ನಗರದ ಎಚ್ಎಎಲ್ ವಿಮಾನ ನಿಲ್ದಾಣದಿಂದ ಪ್ರತ್ಯೇಕ ವಿಶೇಷ ವಿಮಾನಗಳಲ್ಲಿ ಮಣಿಪುರದ ರಾಜಧಾನಿ ಇಂಫಾಲ್ಗೆ ತೆರಳುವರು. ಅಲ್ಲಿಂದ ಪಾದಯಾತ್ರೆ ಆರಂಭವಾಗಲಿರುವ ಥೌಬಾಲ್ಗೆ ತೆರಳಿ, ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಪ್ರತ್ಯೇಕವಾಗಿಯೇ ನಗರಕ್ಕೆ ಹಿಂದಿರುಗುವರು.