<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಕುರ್ಚಿ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್ ನಾಟಕವಾಡುವ ಸಿಎಂ ಸಿದ್ದರಾಮಯ್ಯ ಅವರೇ, ತಮ್ಮದೇ ಸರ್ಕಾರ ಸೃಷ್ಟಿಸಿರುವ ಸಮಸ್ಯೆಗಳ ಕುರಿತು ಚರ್ಚಿಸುವುದಕ್ಕೂ ಒಂದಷ್ಟು ಸಮಯ ಮೀಸಲಿಡಿ. ಸ್ವಾರ್ಥವನ್ನು ಬದಿಗಿಟ್ಟು ಸಮಸ್ಯೆಗಳಿಗೆ ಪರಿಹಾರ ನೀಡಿ ಎಂದು ಆಗ್ರಹಿಸಿದೆ.</p>.<p>ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಗದ್ದುಗೆಗಾಗಿ ಹಗಲಿರುಳು ಚಿಂತಿಸುವ ಸಿಎಂ ಸಿದ್ದರಾಮಯ್ಯನವರೇ </p><ul><li><p>ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಚರ್ಚಿಸುವುದು ಯಾವಾಗ?</p></li><li><p> ಈರುಳ್ಳಿ, ಮೆಕ್ಕೆಜೋಳ ಬೆಲೆ ಕುಸಿದು ರೈತರಿಗೆ ಸಮಸ್ಯೆ ಆಗಿದೆ ಚರ್ಚಿಸುವುದು ಯಾವಾಗ?</p></li><li><p> ರಸ್ತೆಗುಂಡಿ ಸಮಸ್ಯೆ ಕುರಿತು ಚರ್ಚಿಸುವುದು ಯಾವಾಗ?</p></li><li><p> ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ ಚರ್ಚಿಸುವುದು ಯಾವಾಗ?</p></li><li><p> ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಆಗುತ್ತಿದೆ ಚರ್ಚಿಸುವುದು ಯಾವಾಗ?</p></li><li><p> ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ ಚರ್ಚಿಸುವುದು ಯಾವಾಗ? ಎಂದು ಪ್ರಶ್ನಿಸಿದೆ.</p></li></ul>. <h2>ಸಚಿವರಿಗೆ ಔತಣಕೂಟ</h2> <p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ 'ಕಾವೇರಿ'ಯಲ್ಲಿ ಈ ಔತಣಕೂಟ ಆಯೋಜಿಸಲಾಗಿದೆ. </p>.<p>ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ನವೆಂಬರ್ ಗೆ ಎರಡೂವರೆ ವರ್ಷ ತುಂಬುಲಿದ್ದು,, ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಯ ಮಾತು ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಔತಣ ಕೂಟ ಆಯೋಜಿಸಿರುವುದು ನಾನಾ ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.</p> .ಸಚಿವರಿಗೆ ಔತಣಕೂಟ | ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಸಿದ್ದರಾಮಯ್ಯ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಕುರ್ಚಿ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್ ನಾಟಕವಾಡುವ ಸಿಎಂ ಸಿದ್ದರಾಮಯ್ಯ ಅವರೇ, ತಮ್ಮದೇ ಸರ್ಕಾರ ಸೃಷ್ಟಿಸಿರುವ ಸಮಸ್ಯೆಗಳ ಕುರಿತು ಚರ್ಚಿಸುವುದಕ್ಕೂ ಒಂದಷ್ಟು ಸಮಯ ಮೀಸಲಿಡಿ. ಸ್ವಾರ್ಥವನ್ನು ಬದಿಗಿಟ್ಟು ಸಮಸ್ಯೆಗಳಿಗೆ ಪರಿಹಾರ ನೀಡಿ ಎಂದು ಆಗ್ರಹಿಸಿದೆ.</p>.<p>ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಗದ್ದುಗೆಗಾಗಿ ಹಗಲಿರುಳು ಚಿಂತಿಸುವ ಸಿಎಂ ಸಿದ್ದರಾಮಯ್ಯನವರೇ </p><ul><li><p>ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಚರ್ಚಿಸುವುದು ಯಾವಾಗ?</p></li><li><p> ಈರುಳ್ಳಿ, ಮೆಕ್ಕೆಜೋಳ ಬೆಲೆ ಕುಸಿದು ರೈತರಿಗೆ ಸಮಸ್ಯೆ ಆಗಿದೆ ಚರ್ಚಿಸುವುದು ಯಾವಾಗ?</p></li><li><p> ರಸ್ತೆಗುಂಡಿ ಸಮಸ್ಯೆ ಕುರಿತು ಚರ್ಚಿಸುವುದು ಯಾವಾಗ?</p></li><li><p> ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ ಚರ್ಚಿಸುವುದು ಯಾವಾಗ?</p></li><li><p> ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಆಗುತ್ತಿದೆ ಚರ್ಚಿಸುವುದು ಯಾವಾಗ?</p></li><li><p> ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ ಚರ್ಚಿಸುವುದು ಯಾವಾಗ? ಎಂದು ಪ್ರಶ್ನಿಸಿದೆ.</p></li></ul>. <h2>ಸಚಿವರಿಗೆ ಔತಣಕೂಟ</h2> <p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ 'ಕಾವೇರಿ'ಯಲ್ಲಿ ಈ ಔತಣಕೂಟ ಆಯೋಜಿಸಲಾಗಿದೆ. </p>.<p>ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ನವೆಂಬರ್ ಗೆ ಎರಡೂವರೆ ವರ್ಷ ತುಂಬುಲಿದ್ದು,, ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಯ ಮಾತು ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಔತಣ ಕೂಟ ಆಯೋಜಿಸಿರುವುದು ನಾನಾ ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.</p> .ಸಚಿವರಿಗೆ ಔತಣಕೂಟ | ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಸಿದ್ದರಾಮಯ್ಯ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>