ಬಳ್ಳಾರಿ: ’ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆಡಿಯೊ, ವಿಡಿಯೊ, ಡಬ್ಬಿಂಗ್ ಮತ್ತು ಮಿಮಿಕ್ರಿ ಮಿಕ್ಸಿಂಗ್ ಮಾಡುವುದರಲ್ಲಿ ಸಿದ್ಧ ಹಸ್ತರು. ಕುರ್ಚಿ ಉಳಿಸಿಕೊಳ್ಳಲು ಬಿ.ಎಸ್. ಯಡಿಯೂರಪ್ಪನವರು ಮಾತನಾಡಿದ್ದಾರೆ ಎನ್ನಲಾದ ನಕಲಿ ಆಡಿಯೊ ಬಿಡುಗಡೆ ಮಾಡಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಶಾಸಕ ಬಿ. ಶ್ರೀರಾಮುಲು ಆರೋಪಿಸಿದರು.