ಬೆಂಗಳೂರು:'ನಾನು ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ. ನಾನು ಕಾರ್ಯನಿರ್ವಹಿಸುವ ಶೈಲಿಯೇ ಹೀಗೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಹೇಳಿದರು.
ಬಿಡಿಎ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಭಾನುವಾರ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾಕರ ಎತ್ತರಿಸಿದ ರಸ್ತೆ ಕಾರಿಡಾರ್, ಸಬ್ ಅರ್ಬನ್ ರೈಲು, ಪೆರಿಫೆರಲ್ ವರ್ತುಲ ರಸ್ತೆ ಯೋಜನೆಗಳಿಗೆ ಮಂಜೂರಾತಿ ನೀಡಿದ್ದೇವೆ. ಬೆಂಗಳೂರಿಗೆ ಒಟ್ಟು 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದೇವೆ' ಎಂದರು.
ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್‘ಸಿದ್ದರಾಮಯ್ಯ ನಮ್ಮ ನಾಯಕ’ ಎಂದಿದ್ದರು. ಈ ಬಗ್ಗೆಎಎನ್ಐ ಕೇಳಿರುವ ಪ್ರಶ್ನೆಗೆ ಸಿಎಂ ಪ್ರತಿಕ್ರಿಯಿಸಿದ್ದು, ‘ಆ ಬಗ್ಗೆ ಪ್ರತಿಕ್ರಿಯಿಸಲು ನಾನು ಸೂಕ್ತ ವ್ಯಕ್ತಿಯಲ್ಲ. ಕಾಂಗ್ರೆಸ್ ಮುಖಂಡರು ತಮ್ಮ ಶಾಸಕರನ್ನು ನಿಯಂತ್ರಿಸಿಕೊಳ್ಳಬೇಕು. ಇದು ಹೀಗೆಯೇ ಮುಂದುವರಿದರೆ, ನಾನು ಸ್ಥಾನದಿಂದ ಕೆಳಗಿಳಿಯಲು ಸಿದ್ಧ’ ಎಂದರು.
#WATCH: Karnataka CM HD Kumaraswamy says "...If they want to continue with the same thing, I am ready to step down. They are crossing the line", when asked 'Congress MLAs are saying that Siddaramaiah is their CM'.' pic.twitter.com/qwErh4aEq4
— ANI (@ANI) January 28, 2019
‘ನನ್ನ ಕಾರ್ಯವೈಖರಿ ಯಾರಿಗೂ ಇಷ್ಟವಾಗದಿದ್ದರೆ ನಾನು ಹುದ್ದೆ ತೊರೆಯಲು ಸಿದ್ಧ. ನಾನು ಕುರ್ಚಿಗೆ ಅಂಟಿಕೊಂಡಿಲ್ಲ. ನಾವು ಉತ್ತಮವಾಗಿ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದ ಅಭಿವೃದ್ಧಿ ಮಾಡಲು ಮೈತ್ರಿ ಮಾಡಿಕೊಂಡಿದೆ. ನನ್ನ ಹಾಗೂ ಉಪಮುಖ್ಯಮಂತ್ರಿ ನಡುವೆ ಭಿನ್ನಾಭಿಪ್ರಾಯ ಇಲ್ಲ. ನಮ್ಮ ನಡುವೆ ಹೊಂದಾಣಿಕೆ ಚೆನ್ನಾಗಿದೆ. ಈ ಬಗ್ಗೆ ಪಕ್ಷದ ಸಭೆಯಲ್ಲಿ ಚರ್ಚಿಸುವೆ. ನಮಗೆ ಶಾಸಕರ ಬೆಂಬಲವೂ ಬೇಕಿದೆ’ ಎಂದು ಕುಮಾರಸ್ವಾಮಿ ಹೇಳಿದರು.
ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, 'ಅವರು ಆ ರೀತಿ ಹೇಳಿಕೆ ನೀಡಿದ್ದು ಸರಿಯಲ್ಲ. ಇದು ಆಕ್ಷೇಪಾರ್ಹ ಹಾಗೂ ಶಿಸ್ತು ಮೀರಿದ ಹೇಳಿಕೆ. ಅವರಿಗೆ ನೋಟಿಸ್ ನೀಡುತ್ತೇನೆ. ಪಕ್ಷ ಇದನ್ನು ಗಂಭಿರವಾಗಿ ಪರಿಗಣಿಸಲಿದೆ' ಎಂದರು.
'ಮೈತ್ರಿ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಬಿಡಿಎ ಅಧ್ಯಕ್ಷರಿಗೆ ಯಾವುದೇ ಅಸಮಾಧಾನ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಬಹುದು. ಬೆಂಗಳೂರು ಅಭಿವೃದ್ಧಿ ಸಚಿವರ ಜೊತೆ ಚರ್ಚಿಸಬಹುದು ಎಂದರು.
* ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖಂಡರು. ಅವರು ಮುಖ್ಯಮಂತ್ರಿಯಾಗಿ ಉತ್ತಮ ಕಾರ್ಯನಿರ್ವಹಿಸಿದವರು. ಶಾಸಕರಿಗೆ ಅವರೇ(ಸಿದ್ದರಾಮಯ್ಯ) ಸಿಎಂ. ಆತ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲಿ ತಪ್ಪೇನಿದೆ?
– ಜಿ.ಪರಮೇಶ್ವರ, ಉಪಮುಖ್ಯಮಂತ್ರಿ
Karnataka Dy CM on 'Congress MLAs say Siddaramaiah is their leader'': Siddaramaiah has been best CM. He is our CLP leader. For the MLA, he (Siddaramaiah) is the CM. He has expressed his opinion. What is wrong in that? We are all happy with him (Karnataka CM HD Kumaraswamy). pic.twitter.com/bnvAUiM9OA
— ANI (@ANI) January 28, 2019
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.