ಇದಕ್ಕೂ ಮೊದಲು ಕೊಂಕಣ ಎಜುಕೇಶನ್ ಟ್ರಸ್ಟ್ನ ಮೈದಾನದ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿ,‘ಎರಡು ತಿಂಗಳಿನಿಂದ ದೃಶ್ಯ ಮಾಧ್ಯಮದಲ್ಲಿ ಸುಮಲತಾ, ಮಂಡ್ಯವನ್ನು ಮಾತ್ರ ತೋರಿಸುತ್ತಿದ್ದರು. ಹೀಗಾಗಿ ಜನರ ಮನಸ್ಸಿನಿಂದ ನರೇಂದ್ರ ಮೋದಿ ಕಳೆದುಹೋಗಿದ್ದಾರೆ.ಬಿಜೆಪಿಯವರು ಮೋದಿ ಫೋಟೋ ಇಟ್ಟುಕೊಂಡು ಮತ ಕೇಳಲು ಹೋಗುವಂತಾಗಿದೆ’ ಎಂದು ಹೇಳಿದರು.