ಹರಿಹರ: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದರೆ ಅಭೂತಪೂರ್ವ ಜಯಗಳಿಸುತ್ತಾರೆ. ಕಾಂಗ್ರೆಸ್ ದೂಳಿಪಟವಾಗುವುದಲ್ಲದೇ ಜಿಲ್ಲೆಯ 5 ಸ್ಥಾನಗಳೂ ಜೆಡಿಎಸ್ಗೆ ದೊರಕುತ್ತವೆ. ಹರಿಹರ ಕ್ಷೇತ್ರದಲ್ಲಿ ನನ್ನ ಗೆಲುವೂ ಸುಲಭವಾಗುತ್ತದೆ. ಆದ್ದರಿಂದ ಸಿ.ಎಂ. ಇಬ್ರಾಹಿಂ ಮತ್ತು ಎಚ್.ಡಿ. ಕುಮಾರಸ್ವಾಮಿ ಇದನ್ನು ಘೋಷಣೆ ಮಾಡಬೇಕು’ ಎಂದು ಹರಿಹರ ಮಾಜಿ ಶಾಸಕಎಚ್.ಎಸ್. ಶಿವಶಂಕರ್ ಮನವಿ ಮಾಡಿದರು.