<p><strong>ಬೆಂಗಳೂರು: </strong>‘ಉನ್ನತ ಶಿಕ್ಷಣದ ಬಲವರ್ಧನೆಗೆ ವಿಶ್ವದ ಇತರೆ ವಿಶ್ವವಿದ್ಯಾಲಯಗಳ ಸಹಭಾಗಿತ್ವ ಅನಿವಾರ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ರಾಜ್ಯದಲ್ಲಿ ಹೊಸದಾಗಿ ಆರಂಭ ವಾದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆ ದೇಶಕ್ಕೇ ಮಾದರಿಯಾಗಿದೆ. ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತೆ ಅವುಗಳ ಪ್ರಗತಿಯಾಗಬೇಕು‘ ಎಂದರು</p>.<p>‘ಕರ್ನಾಟಕದ ಮಕ್ಕಳಿಗೂ ಐಐಟಿ ಶಿಕ್ಷಣ ದೊರಕಿಸಲು ಎಲ್ಲ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನೂ ಐಐಟಿ ಮಾದರಿಯಲ್ಲೇ ಅಭಿವೃದ್ಧಿಪಡಿಸಲಾಗುವುದು. ಅದಕ್ಕಾಗಿ ಜಗತ್ತಿನ ಉನ್ನತ ವಿಶ್ವವಿದ್ಯಾಲಯಗಳ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ’ ಎಂದರು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ನಾಲ್ಕು ವರ್ಷಗಳಲ್ಲಿ 25 ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಡಿಜಿಟಲೀಕರಣದ ಮೂಲಕ ಆಮೂಲಾಗ್ರ ಬದಲಾವಣೆ ಮಾಡಲಾಗುತ್ತಿದೆ. ಇದರ ಫಲವಾಗಿ 310 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮೊದಲ ಬಾರಿಗೆ ನ್ಯಾಕ್ ಮಾನ್ಯತೆ ಪಡೆದುಕೊಂಡಿವೆ’ ಎಂದರು.</p>.<p>ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ವೈ.ಎಸ್. ಸಿದ್ದೇಗೌಡ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಉನ್ನತ ಶಿಕ್ಷಣದ ಬಲವರ್ಧನೆಗೆ ವಿಶ್ವದ ಇತರೆ ವಿಶ್ವವಿದ್ಯಾಲಯಗಳ ಸಹಭಾಗಿತ್ವ ಅನಿವಾರ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ರಾಜ್ಯದಲ್ಲಿ ಹೊಸದಾಗಿ ಆರಂಭ ವಾದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆ ದೇಶಕ್ಕೇ ಮಾದರಿಯಾಗಿದೆ. ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತೆ ಅವುಗಳ ಪ್ರಗತಿಯಾಗಬೇಕು‘ ಎಂದರು</p>.<p>‘ಕರ್ನಾಟಕದ ಮಕ್ಕಳಿಗೂ ಐಐಟಿ ಶಿಕ್ಷಣ ದೊರಕಿಸಲು ಎಲ್ಲ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನೂ ಐಐಟಿ ಮಾದರಿಯಲ್ಲೇ ಅಭಿವೃದ್ಧಿಪಡಿಸಲಾಗುವುದು. ಅದಕ್ಕಾಗಿ ಜಗತ್ತಿನ ಉನ್ನತ ವಿಶ್ವವಿದ್ಯಾಲಯಗಳ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ’ ಎಂದರು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ನಾಲ್ಕು ವರ್ಷಗಳಲ್ಲಿ 25 ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಡಿಜಿಟಲೀಕರಣದ ಮೂಲಕ ಆಮೂಲಾಗ್ರ ಬದಲಾವಣೆ ಮಾಡಲಾಗುತ್ತಿದೆ. ಇದರ ಫಲವಾಗಿ 310 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮೊದಲ ಬಾರಿಗೆ ನ್ಯಾಕ್ ಮಾನ್ಯತೆ ಪಡೆದುಕೊಂಡಿವೆ’ ಎಂದರು.</p>.<p>ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ವೈ.ಎಸ್. ಸಿದ್ದೇಗೌಡ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>