ಬೆಂಗಳೂರು: ರೈತರ ₹34 ಸಾವಿರ ಕೋಟಿ ಮೊತ್ತದ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.
ಚೊಚ್ಚಲ ಬಜೆಟ್ ಮಂಡಿಸುತ್ತಿರುವ ಅವರು ಪ್ರತಿ ರೈತ ಕುಟುಂಬದ ₹2 ಲಕ್ಷವರೆಗಿನ ಸಾಲ ಮನ್ನಾ ಮಾಡುವುದಾಗಿ ತಿಳಿಸಿದರು.
ಇಸ್ರೇಲ್ ಮಾದರಿ ನೀರಾವರಿಗಾಗಿ ₹150 ಕೋಟಿ: ಕೃಷಿಗೆ ಪ್ರಮುಖ ಆದ್ಯತೆ ನೀಡುವುದಾಗಿ ಬಜೆಟ್ ಮಂಡನೆ ಆರಂಭದಲ್ಲೇ ಘೋಷಿಸಿದ ಮುಖ್ಯಮಂತ್ರಿಗಳು, ಇಸ್ರೇಲ್ ಮಾದರಿ ನೀರಾವರಿಗಾಗಿ ₹150 ಕೋಟಿ ಮೀಸಲಿಡುವುದಾಗಿ ತಿಳಿಸಿದರು.