ಮಂಗಳೂರು: ನಿನ್ನೆ ಬಿಡುಗಡೆ ಮಾಡಿರುವ ಸಿಡಿಯಲ್ಲಿ ಯಾರ್ಯಾರು, ಏನೇನು ಮಾತನಾಡಿದ್ದಾರೆ ಎಂಬುದರ ಬಗ್ಗೆ ಸಮಗ್ರ ತನಿಖೆ ಆಗಬೇಕು. ಆಗಲೇ ಸತ್ಯ ಹೊರಗೆ ಬರಲಿದೆ. ಯಡಿಯೂರಪ್ಪ ಮಾತನಾಡಿದ್ದಾರೆ ಎಂದು ನಾನು ಹೇಳಿದ್ದೇನೆಯೇ? ತನಿಖೆ ನಂತರ ಯಾರು ಮಾತನಾಡದ್ದಾರೆ ಎಂಬುದು ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.