ಚಂಡರಕಿ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿಯೂ ಮುಖ್ಯಮಂತ್ರಿ ಲವಲವಿಕೆಯಿಂದ ಇರಲಿಲ್ಲ. ಮುಖ ಕಳೆಗುಂದಿತ್ತು. ವೇದಿಕೆಯಲ್ಲಿ ತಮ್ಮ ಅಕ್ಕಪಕ್ಕ ಸಚಿವರಾದ ಪ್ರಿಯಾಂಕ್ ಖರ್ಗೆ, ರಾಜಶೇಖರ ಪಾಟೀಲ ಹುಮನಾಬಾದ್ (ಇವರಿಬ್ಬರೂ ಕಾಂಗ್ರೆಸ್ನವರು) ಅವರನ್ನು ಕೂರಿಸಿಕೊಂಡು ಅವರೊಂದಿಗೆ ಆತ್ಮೀಯವಾಗಿ ಮಾತನಾಡುತ್ತ ‘ಎಲ್ಲವೂ ಸರಿ ಇದೆ’ ಎಂಬಂತೆ ಬಿಂಬಿಸಲು ಯತ್ನಿಸಿದರು.