<p><strong>ಬೆಂಗಳೂರು:</strong>‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.</p>.<p>ಉತ್ತರ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಯುವಕರು ಆರಂಭಿಸಿರುವ ‘ಆನ್ಲೈನ್ ಅಭಿಯಾನ’ಕ್ಕೆ ಪ್ರತಿಕ್ರಿಯೆಯಾಗಿ ಮುಖ್ಯಮಂತ್ರಿ ಕಚೇರಿ ಈ ಟ್ವೀಟ್ ಮಾಡಿದೆ.</p>.<p>ಉತ್ತರ ಕನ್ನಡ ಜಿಲ್ಲೆಯ ಕರಾವಳಿ, ಮಲೆನಾಡಿನ ಗಡಿಭಾಗದಲ್ಲಿಅಪಘಾತವಾದರೆ ಅಥವಾಇನ್ಯಾವುದೇ ರೀತಿಯಲ್ಲಿ ಜೀವಕ್ಕೆ ಹಾನಿಯಾಗುವ ಪರಿಸ್ಥಿತಿಯುಂಟಾದರೆ ಸೂಕ್ತ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆಯಿಲ್ಲ. ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು ಮಂಗಳೂರು, ಮಣಿಪಾಲ ಅಥವಾ ಗೋವಾಕ್ಕೆ ಹೋಗಬೇಕಾಗಿದೆ. ಇದರಿಂದ ಆಕ್ರೋಶಗೊಂಡಿರುವ ಯುವಕರು ಅಭಿಯಾನ ಆರಂಭಿಸಿದ್ದಾರೆ.</p>.<p><strong>#WeNeedEmergencyHospitalInUK</strong> ಎಂಬ ಹ್ಯಾಷ್ ಟ್ಯಾಗ್ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಬೇಡಿಕೆ ಮಂಡಿಸಲಾಗುತ್ತಿದೆ. ತಮ್ಮ ಬರಹಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಸದ ಅನಂತಕುಮಾರ ಹೆಗಡೆ, ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಮ, ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಯುವಕರು ‘ಟ್ಯಾಗ್’ ಮಾಡುತ್ತಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/district/uthara-kannada/social-media-users-launch-642592.html" target="_blank">ಉತ್ತರ ಕನ್ನಡ: ಹೈಟೆಕ್ ಆಸ್ಪತ್ರೆಗೆ ಆನ್ಲೈನ್ ಅಭಿಯಾನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.</p>.<p>ಉತ್ತರ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಯುವಕರು ಆರಂಭಿಸಿರುವ ‘ಆನ್ಲೈನ್ ಅಭಿಯಾನ’ಕ್ಕೆ ಪ್ರತಿಕ್ರಿಯೆಯಾಗಿ ಮುಖ್ಯಮಂತ್ರಿ ಕಚೇರಿ ಈ ಟ್ವೀಟ್ ಮಾಡಿದೆ.</p>.<p>ಉತ್ತರ ಕನ್ನಡ ಜಿಲ್ಲೆಯ ಕರಾವಳಿ, ಮಲೆನಾಡಿನ ಗಡಿಭಾಗದಲ್ಲಿಅಪಘಾತವಾದರೆ ಅಥವಾಇನ್ಯಾವುದೇ ರೀತಿಯಲ್ಲಿ ಜೀವಕ್ಕೆ ಹಾನಿಯಾಗುವ ಪರಿಸ್ಥಿತಿಯುಂಟಾದರೆ ಸೂಕ್ತ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆಯಿಲ್ಲ. ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು ಮಂಗಳೂರು, ಮಣಿಪಾಲ ಅಥವಾ ಗೋವಾಕ್ಕೆ ಹೋಗಬೇಕಾಗಿದೆ. ಇದರಿಂದ ಆಕ್ರೋಶಗೊಂಡಿರುವ ಯುವಕರು ಅಭಿಯಾನ ಆರಂಭಿಸಿದ್ದಾರೆ.</p>.<p><strong>#WeNeedEmergencyHospitalInUK</strong> ಎಂಬ ಹ್ಯಾಷ್ ಟ್ಯಾಗ್ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಬೇಡಿಕೆ ಮಂಡಿಸಲಾಗುತ್ತಿದೆ. ತಮ್ಮ ಬರಹಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಸದ ಅನಂತಕುಮಾರ ಹೆಗಡೆ, ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಮ, ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಯುವಕರು ‘ಟ್ಯಾಗ್’ ಮಾಡುತ್ತಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/district/uthara-kannada/social-media-users-launch-642592.html" target="_blank">ಉತ್ತರ ಕನ್ನಡ: ಹೈಟೆಕ್ ಆಸ್ಪತ್ರೆಗೆ ಆನ್ಲೈನ್ ಅಭಿಯಾನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>