<p><strong>ಬೆಂಗಳೂರು</strong>: ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ಕಲಬುರಗಿಯ ಐದು ವರ್ಷದ ಬಾಲಕ ಮಂಜುನಾಥನ ಚಿಕಿತ್ಸೆಗೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ ₹4.91 ಲಕ್ಷ ನೆರವು ಮಂಜೂರು ಮಾಡಲಾಗಿದೆ.</p>.<p>ಕಲಬುರಗಿಯ ವಿಜಯಕುಮಾರ್ ಪರಮೇಶ್ವರ ಅವರು 2025ರ ಡಿಸೆಂಬರ್ 1ರಂದು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದರು. ‘ನಮ್ಮ ಮಗನ ಚಿಕಿತ್ಸೆಗೆ ₹30 ಲಕ್ಷ ವೆಚ್ಚವಾಗುತ್ತದೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ನಾನೂ ಅಂಗವಿಕಲನಾಗಿದ್ದು, ಚಿಕಿತ್ಸೆ ವೆಚ್ಚ ಭರಿಸಲಾಗುತ್ತಿಲ್ಲ. ನೆರವು ಒದಗಿಸಿ’ ಎಂದು ಕೋರಿದ್ದರು.</p>.<p>ಅವರ ಮನವಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ₹5 ಲಕ್ಷ ಪರಿಹಾರ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದರಂತೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯ ಲೆಕ್ಕಾಧಿಕಾರಿಯು, ಬಾಲಕನಿಗೆ ಚಿಕಿತ್ಸೆ ನೀಡಿರುವ ನಗರದ ಎಚ್ಸಿಜಿ ಆಸ್ಪತ್ರೆಗೆ ಪತ್ರ ಬರೆದಿದ್ದಾರೆ.</p>.<p>‘ಬಾಲಕನ ಚಿಕಿತ್ಸೆಗೆ ಆಗುವ ವೆಚ್ಚದ ಸಂಪೂರ್ಣ ವಿವರ ಒದಗಿಸಿ. ನಮ್ಮ ಕಚೇರಿಗೆ ಮನವಿ ಸಲ್ಲಿಸಿದ ನಂತರದ (2025ರ ಡಿಸೆಂಬರ್ 2) ಬಿಲ್ಲುಗಳಿಗೆ ಮಾತ್ರವೇ ಆರ್ಥಿಕ ನೆರವು ಒದಗಿಸಲಾಗುವುದು. ಚಿಕಿತ್ಸಾ ವೆಚ್ಚದ ಶೇ 50ರಷ್ಟು ಅಥವಾ ₹4,91,750 ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪರಿಗಣಿಸಲಾಗುತ್ತದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ಕಲಬುರಗಿಯ ಐದು ವರ್ಷದ ಬಾಲಕ ಮಂಜುನಾಥನ ಚಿಕಿತ್ಸೆಗೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ ₹4.91 ಲಕ್ಷ ನೆರವು ಮಂಜೂರು ಮಾಡಲಾಗಿದೆ.</p>.<p>ಕಲಬುರಗಿಯ ವಿಜಯಕುಮಾರ್ ಪರಮೇಶ್ವರ ಅವರು 2025ರ ಡಿಸೆಂಬರ್ 1ರಂದು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದರು. ‘ನಮ್ಮ ಮಗನ ಚಿಕಿತ್ಸೆಗೆ ₹30 ಲಕ್ಷ ವೆಚ್ಚವಾಗುತ್ತದೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ನಾನೂ ಅಂಗವಿಕಲನಾಗಿದ್ದು, ಚಿಕಿತ್ಸೆ ವೆಚ್ಚ ಭರಿಸಲಾಗುತ್ತಿಲ್ಲ. ನೆರವು ಒದಗಿಸಿ’ ಎಂದು ಕೋರಿದ್ದರು.</p>.<p>ಅವರ ಮನವಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ₹5 ಲಕ್ಷ ಪರಿಹಾರ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದರಂತೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯ ಲೆಕ್ಕಾಧಿಕಾರಿಯು, ಬಾಲಕನಿಗೆ ಚಿಕಿತ್ಸೆ ನೀಡಿರುವ ನಗರದ ಎಚ್ಸಿಜಿ ಆಸ್ಪತ್ರೆಗೆ ಪತ್ರ ಬರೆದಿದ್ದಾರೆ.</p>.<p>‘ಬಾಲಕನ ಚಿಕಿತ್ಸೆಗೆ ಆಗುವ ವೆಚ್ಚದ ಸಂಪೂರ್ಣ ವಿವರ ಒದಗಿಸಿ. ನಮ್ಮ ಕಚೇರಿಗೆ ಮನವಿ ಸಲ್ಲಿಸಿದ ನಂತರದ (2025ರ ಡಿಸೆಂಬರ್ 2) ಬಿಲ್ಲುಗಳಿಗೆ ಮಾತ್ರವೇ ಆರ್ಥಿಕ ನೆರವು ಒದಗಿಸಲಾಗುವುದು. ಚಿಕಿತ್ಸಾ ವೆಚ್ಚದ ಶೇ 50ರಷ್ಟು ಅಥವಾ ₹4,91,750 ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪರಿಗಣಿಸಲಾಗುತ್ತದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>