<p><strong>ಮೈಸೂರು:</strong> ‘ಕೆಲವು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಕುರಿತು ಈ ಬಾರಿಯ ಬಜೆಟ್ನಲ್ಲೇ ಘೋಷಣೆ ಮಾಡಲಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. </p><p>ಖಾಸಗಿ ಕಾರ್ಯಕ್ರಮಕ್ಕೆಂದು ಬುಧವಾರ ಇಲ್ಲಿನ ವಿಮಾನನಿಲ್ದಾಣಕ್ಕೆ ಬಂದಿಳಿದ ವೇಳೆ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p><p>‘ನಾವು ನೇಮಕಾತಿ ನಡೆಸುತ್ತಿದ್ದೇವೆ. ಒಳಮೀಸಲಾತಿ ಸಮಸ್ಯೆ ಇದ್ದಿದ್ದರಿಂದ ಸ್ವಲ್ಪ ವಿಳಂಬವಾಗಿದೆ. ಕೊಟ್ಟ ಮಾತಿನಂತೆ ಹುದ್ದೆ ಭರ್ತಿ ಮಾಡುತ್ತೇವೆ’ ಎಂದರು.</p><p>‘ಧಾರವಾಡದಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳೇಕೆ ಇವರನ್ನು (ಬಿಜೆಪಿಯವರನ್ನು) ಬಿಟ್ಟು ಬೇರೆಡೆ ಸಭೆ ನಡೆಸಿದರು? ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ರಲ್ಲ ಏನಾಯಿತು? ಅವರು ಅಧಿಕಾರಕ್ಕೆ ಬಂದು 11 ವರ್ಷಗಳಾದವು. ಈವರೆಗೆ ಎಷ್ಟು ಉದ್ಯೋಗ ಕೊಡಬೇಕಾಗಿತ್ತು? ಬಿಜೆಪಿಯವರು ರಾಜ್ಯದಲ್ಲಿ 4 ವರ್ಷ ಅಧಿಕಾರದಲ್ಲಿದ್ದಾಗ ಎಷ್ಟು ಕೆಲಸ ಕೊಟ್ಟರು? ನಮ್ಮನ್ನು ಪ್ರಶ್ನಿಸಲು ಅವರಿಗೆ ಯಾವ ನೈತಿಕ ಹಕ್ಕಿದೆ’ ಎಂದು ಪ್ರಶ್ನಿಸಿದರು.</p><p>ಆರೋಗ್ಯ ಇಲಾಖೆಯಿಂದ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲೂ ಮುದ್ರಿಸಿದ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಕುರಿತು ಮಾತನಾಡಿದ ಅವರು, ‘ಉರ್ದು ಪತ್ರಿಕೆಗಳಿಗೂ ಜಾಹೀರಾತು ಕೊಡಬೇಕಲ್ಲವೇ? ಆಗ ಅದು ಉರ್ದುನಲ್ಲೇ ಇರಬೇಕಲ್ಲವೇ?’ ಎಂದರು.</p><p>‘ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನನ್ನೂ ಮಾಡುವುದಿಲ್ಲ. ವಿರೋಧ ಪಕ್ಷದಲ್ಲಿದ್ದಾಗ ಪ್ರತಿಭಟಿಸುವುದೇ ಅವರ ಚಾಳಿ’ ಎಂದು ಟೀಕಿಸಿದರು.</p><p>ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕರಾದ ಕೆ.ಹರೀಶ್ಗೌಡ, ಡಿ.ರವಿಶಂಕರ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಹಾಗೂ ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕೆಲವು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಕುರಿತು ಈ ಬಾರಿಯ ಬಜೆಟ್ನಲ್ಲೇ ಘೋಷಣೆ ಮಾಡಲಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. </p><p>ಖಾಸಗಿ ಕಾರ್ಯಕ್ರಮಕ್ಕೆಂದು ಬುಧವಾರ ಇಲ್ಲಿನ ವಿಮಾನನಿಲ್ದಾಣಕ್ಕೆ ಬಂದಿಳಿದ ವೇಳೆ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p><p>‘ನಾವು ನೇಮಕಾತಿ ನಡೆಸುತ್ತಿದ್ದೇವೆ. ಒಳಮೀಸಲಾತಿ ಸಮಸ್ಯೆ ಇದ್ದಿದ್ದರಿಂದ ಸ್ವಲ್ಪ ವಿಳಂಬವಾಗಿದೆ. ಕೊಟ್ಟ ಮಾತಿನಂತೆ ಹುದ್ದೆ ಭರ್ತಿ ಮಾಡುತ್ತೇವೆ’ ಎಂದರು.</p><p>‘ಧಾರವಾಡದಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳೇಕೆ ಇವರನ್ನು (ಬಿಜೆಪಿಯವರನ್ನು) ಬಿಟ್ಟು ಬೇರೆಡೆ ಸಭೆ ನಡೆಸಿದರು? ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ರಲ್ಲ ಏನಾಯಿತು? ಅವರು ಅಧಿಕಾರಕ್ಕೆ ಬಂದು 11 ವರ್ಷಗಳಾದವು. ಈವರೆಗೆ ಎಷ್ಟು ಉದ್ಯೋಗ ಕೊಡಬೇಕಾಗಿತ್ತು? ಬಿಜೆಪಿಯವರು ರಾಜ್ಯದಲ್ಲಿ 4 ವರ್ಷ ಅಧಿಕಾರದಲ್ಲಿದ್ದಾಗ ಎಷ್ಟು ಕೆಲಸ ಕೊಟ್ಟರು? ನಮ್ಮನ್ನು ಪ್ರಶ್ನಿಸಲು ಅವರಿಗೆ ಯಾವ ನೈತಿಕ ಹಕ್ಕಿದೆ’ ಎಂದು ಪ್ರಶ್ನಿಸಿದರು.</p><p>ಆರೋಗ್ಯ ಇಲಾಖೆಯಿಂದ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲೂ ಮುದ್ರಿಸಿದ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಕುರಿತು ಮಾತನಾಡಿದ ಅವರು, ‘ಉರ್ದು ಪತ್ರಿಕೆಗಳಿಗೂ ಜಾಹೀರಾತು ಕೊಡಬೇಕಲ್ಲವೇ? ಆಗ ಅದು ಉರ್ದುನಲ್ಲೇ ಇರಬೇಕಲ್ಲವೇ?’ ಎಂದರು.</p><p>‘ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನನ್ನೂ ಮಾಡುವುದಿಲ್ಲ. ವಿರೋಧ ಪಕ್ಷದಲ್ಲಿದ್ದಾಗ ಪ್ರತಿಭಟಿಸುವುದೇ ಅವರ ಚಾಳಿ’ ಎಂದು ಟೀಕಿಸಿದರು.</p><p>ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕರಾದ ಕೆ.ಹರೀಶ್ಗೌಡ, ಡಿ.ರವಿಶಂಕರ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಹಾಗೂ ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>