<p><strong>ಬೆಂಗಳೂರು</strong>: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಳಿಗ್ಗೆಯಿಂದ ನಡೆದ ಸುದೀರ್ಘ ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ.</p><p>ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಹಿಂದಿನ 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿಗೆ ಅದರ ಶೇಕಡ 10ರಷ್ಟನ್ನು ಸೇರಿಸಿ ಗರಿಷ್ಠ 200 ಯೂನಿಟ್ವರೆಗೆ ಎಲ್ಲ ಮನೆಗಳಿಗೂ ಉಚಿತ ವಿದ್ಯುತ್ ವಿದ್ಯುತ್ ನೀಡಲಾಗುತ್ತದೆ.</p><p>ಎರಡನೇ ಗ್ಯಾರಂಟಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15ರಿಮದ ಜಾರಿಗೆ ಸರ್ಕಾರ ನಿರ್ಧರಿಸಿದೆ. ಮನೆ ಯಜಮಾನಿಗೆ ಪ್ರತಿ ತಿಂಗಳು ₹2000 ಸಿಗಲಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಜೂನ್ 15ರಿಂದ ಜುಲೈ 15ರವರೆಗೆ ಅವಕಾಶ ಇರಲಿದೆ. ಬ್ಯಾಂಕ್ ಪಾಸ್ಬುಕ್, ಆಧಾರ್ ದಾಖಲೆಗಳ ಜೊತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಎಪಿಎಲ್, ಬಿಪಿಎಲ್ ಷರತ್ತುಗಳಿಲ್ಲದೆ ಎಲ್ಲ ಮನೆ ಯಜಮಾನಿಯರಿಗೂ ಯೋಜನೆ ಅನ್ವಯಿಸಲಿದೆ.</p><p>ಸಾಮಾಜಿಕ ಭದ್ರತೆ ಪಿಂಚಣಿದಾರರಿಗೂ(ವಿಧವೆಯರು, ಹಿರಿಯ ನಾಗರಿಕರು ಮತ್ತು ಅಂಗವಿಕಲರು) 2000 ರೂ. ಕೊಡತೇವೆ.</p><p>ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆ.ಜಿ ಅಕ್ಕಿ ವಿತರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದು ಜುಲೈ ತಿಂಗಳಿನಿಂದ ಜಾರಿಗೆ ಬರಲಿದೆ.</p><p>ನಾಲ್ಕನೇ ಗ್ಯಾರಂಟಿಯಾಗಿ ಶಕ್ತಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಿಸಲಾಗಿದೆ. ಎಸಿ, ಸ್ಲೀಪರ್ ಬಸ್ಗಳನ್ನು ಹೊರತುಪಡಿಸಿ ರಾಜ್ಯಾದಾದ್ಯಂತ ಎಲ್ಲೆಡೆ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯದ ಒಳಗೆ ಸಂಚರಿಸುವ ಬಸ್ಗಳಲ್ಲಿ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಬಸ್ನಲ್ಲಿ ಪುರುಷರಿಗೆ ಶೇಕಡ 50ರಷ್ಟು ಆಸನಗಳನ್ನು ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿದ್ಯಾರ್ಥಿನಿಯರಿಗೂ ಯೋಜನೆ ಅನ್ವಯವಾಗುತ್ತದೆ. ಜೂನ್ 11ರಂದು ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.</p><p>ಐದನೇ ಗ್ಯಾರಂಟಿಯಾಗಿ ಯುವನಿಧಿ ಜಾರಿಯನ್ನು ಸರ್ಕಾರ ಘೋಷಿಸಿದೆ. 2022-23ರಲ್ಲಿ ವ್ಯಾಸಂಗ ಮಾಡಿದ ಎಲ್ಲ ವೃತ್ತಿ ಪರ, ಪದವಿ ಕೋರ್ಸ್ ಪೂರೈಸಿದವರಿಗೆ 24 ತಿಂಗಳು ವರೆಗೆ ಪ್ರತಿ ತಿಂಗಳಿಗೆ 3 ಸಾವಿರ ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನೀಡಲಾಗುತ್ತದೆ. ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕಿದರೆ ಭತ್ಯೆ ಸ್ಥಗಿತಗೊಳ್ಳುತ್ತದೆ. ಕಳೆದ ವರ್ಷ 4.5 ಲಕ್ಷ ವಿದ್ಯಾರ್ಧಿಗಳು ಪದವಿ ಪೂರೈಸಿದ್ದು, ಭತ್ಯೆ ಬೇಕಾದವರು ಅರ್ಜಿ ಹಾಕಬೇಕು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಳಿಗ್ಗೆಯಿಂದ ನಡೆದ ಸುದೀರ್ಘ ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ.</p><p>ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಹಿಂದಿನ 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿಗೆ ಅದರ ಶೇಕಡ 10ರಷ್ಟನ್ನು ಸೇರಿಸಿ ಗರಿಷ್ಠ 200 ಯೂನಿಟ್ವರೆಗೆ ಎಲ್ಲ ಮನೆಗಳಿಗೂ ಉಚಿತ ವಿದ್ಯುತ್ ವಿದ್ಯುತ್ ನೀಡಲಾಗುತ್ತದೆ.</p><p>ಎರಡನೇ ಗ್ಯಾರಂಟಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15ರಿಮದ ಜಾರಿಗೆ ಸರ್ಕಾರ ನಿರ್ಧರಿಸಿದೆ. ಮನೆ ಯಜಮಾನಿಗೆ ಪ್ರತಿ ತಿಂಗಳು ₹2000 ಸಿಗಲಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಜೂನ್ 15ರಿಂದ ಜುಲೈ 15ರವರೆಗೆ ಅವಕಾಶ ಇರಲಿದೆ. ಬ್ಯಾಂಕ್ ಪಾಸ್ಬುಕ್, ಆಧಾರ್ ದಾಖಲೆಗಳ ಜೊತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಎಪಿಎಲ್, ಬಿಪಿಎಲ್ ಷರತ್ತುಗಳಿಲ್ಲದೆ ಎಲ್ಲ ಮನೆ ಯಜಮಾನಿಯರಿಗೂ ಯೋಜನೆ ಅನ್ವಯಿಸಲಿದೆ.</p><p>ಸಾಮಾಜಿಕ ಭದ್ರತೆ ಪಿಂಚಣಿದಾರರಿಗೂ(ವಿಧವೆಯರು, ಹಿರಿಯ ನಾಗರಿಕರು ಮತ್ತು ಅಂಗವಿಕಲರು) 2000 ರೂ. ಕೊಡತೇವೆ.</p><p>ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆ.ಜಿ ಅಕ್ಕಿ ವಿತರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದು ಜುಲೈ ತಿಂಗಳಿನಿಂದ ಜಾರಿಗೆ ಬರಲಿದೆ.</p><p>ನಾಲ್ಕನೇ ಗ್ಯಾರಂಟಿಯಾಗಿ ಶಕ್ತಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಿಸಲಾಗಿದೆ. ಎಸಿ, ಸ್ಲೀಪರ್ ಬಸ್ಗಳನ್ನು ಹೊರತುಪಡಿಸಿ ರಾಜ್ಯಾದಾದ್ಯಂತ ಎಲ್ಲೆಡೆ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯದ ಒಳಗೆ ಸಂಚರಿಸುವ ಬಸ್ಗಳಲ್ಲಿ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಬಸ್ನಲ್ಲಿ ಪುರುಷರಿಗೆ ಶೇಕಡ 50ರಷ್ಟು ಆಸನಗಳನ್ನು ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿದ್ಯಾರ್ಥಿನಿಯರಿಗೂ ಯೋಜನೆ ಅನ್ವಯವಾಗುತ್ತದೆ. ಜೂನ್ 11ರಂದು ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.</p><p>ಐದನೇ ಗ್ಯಾರಂಟಿಯಾಗಿ ಯುವನಿಧಿ ಜಾರಿಯನ್ನು ಸರ್ಕಾರ ಘೋಷಿಸಿದೆ. 2022-23ರಲ್ಲಿ ವ್ಯಾಸಂಗ ಮಾಡಿದ ಎಲ್ಲ ವೃತ್ತಿ ಪರ, ಪದವಿ ಕೋರ್ಸ್ ಪೂರೈಸಿದವರಿಗೆ 24 ತಿಂಗಳು ವರೆಗೆ ಪ್ರತಿ ತಿಂಗಳಿಗೆ 3 ಸಾವಿರ ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನೀಡಲಾಗುತ್ತದೆ. ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕಿದರೆ ಭತ್ಯೆ ಸ್ಥಗಿತಗೊಳ್ಳುತ್ತದೆ. ಕಳೆದ ವರ್ಷ 4.5 ಲಕ್ಷ ವಿದ್ಯಾರ್ಧಿಗಳು ಪದವಿ ಪೂರೈಸಿದ್ದು, ಭತ್ಯೆ ಬೇಕಾದವರು ಅರ್ಜಿ ಹಾಕಬೇಕು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>