ಶಾಸಕರು ಮತ್ತು ಜಿಲ್ಲಾ ಸಚಿವರ ನಡುವೆ ಸಮನ್ವಯ, ಸರ್ಕಾರ ಮತ್ತು ಪಕ್ಷದ ಜತೆ ಸಮನ್ವಯ, ಐದು ಗ್ಯಾರಂಟಿ ಯೋಜನೆಗಳನ್ನು ಮಧ್ಯಮ ಮತ್ತು ಬಡವರ್ಗದ ಎಲ್ಲ ಜಾತಿ ಸಮುದಾಯಗಳ ಮನೆ ಬಾಗಿಲಿಗೆ ತಲುಪಿಸುವುದು, ಸ್ಥಳೀಯ ಸಂಸ್ಥೆಗಳು ಮತ್ತು ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದೂ ಮೂಲಗಳು ಹೇಳಿವೆ.