<p><strong>ಬೆಂಗಳೂರು</strong>: ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು. ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ವಿಧಾನಸೌಧದ ಆವರಣದಲ್ಲಿ ಮಂಗಳವಾರ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹುತೇಕ ಬಡವರಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ವಾಣಿಜ್ಯ ಉದ್ದೇಶದ ಬಾಡಿಗೆ ಹೊರತುಪಡಿಸಿ ಎಲ್ಲ ಬಾಡಿಗೆ ಗೃಹಗಳಿಗೂ ಉಚಿತ ವಿದ್ಯುತ್ ದೊರೆಯಲಿದೆ ಎಂದರು.</p>.<p>ಬಿಜೆಪಿ ನಾಯಕರು ಹಿಂದೆ ನೀಡಿದ್ದ ಭರವಸೆಗಳನ್ನು ನಾಲ್ಕು ವರ್ಷಗಳಲ್ಲಿ ಈಡೇರಿಸಲಿಲ್ಲ. ನೀರಾವರಿಗೆ ₹1.50 ಲಕ್ಷ ವಿನಿಯೋಗಿಸಲಿಲ್ಲ. ರೈತರ ಸಾಲ ಮನ್ನಾಮಾಡಲಿಲ್ಲ. ಇದರಿಂದ ಜನರು ಅವರನ್ನು ಮನೆಗೆ ಕಳುಹಿಸಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕೊಟ್ಟ ಭರವಸೆ ಈಡೇರಿಸಿದೆ. ಅದನ್ನು ಸಹಿಸದೇ ಟೀಕೆ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ಹಿಂದೆಯೂ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿತ್ತು. ಈಗಲೂ ಭರವಸೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದರು.</p>.<p>ಪಠ್ಯ ಪರಿಷ್ಕರಣೆ, ಎನ್ ಇಪಿ ಕುರಿತು ತಜ್ಞರ ಜತೆ ಚರ್ಚಿಸಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.</p><p><strong>ಇದನ್ನೂ ಓದಿ... <a href="https://www.prajavani.net/news/karnataka-news/guidelines-for-gruha-jyoathi-and-shakti-schemes-2313689">ಗೃಹ ಜ್ಯೋತಿ, ಶಕ್ತಿ ಯೋಜನೆಗಳಿಗೆ ಮಾರ್ಗಸೂಚಿ: ಬಾಡಿಗೆದಾರರಿಗೆ ಸಿಗುವುದೇ ಗ್ಯಾರಂಟಿ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು. ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ವಿಧಾನಸೌಧದ ಆವರಣದಲ್ಲಿ ಮಂಗಳವಾರ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹುತೇಕ ಬಡವರಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ವಾಣಿಜ್ಯ ಉದ್ದೇಶದ ಬಾಡಿಗೆ ಹೊರತುಪಡಿಸಿ ಎಲ್ಲ ಬಾಡಿಗೆ ಗೃಹಗಳಿಗೂ ಉಚಿತ ವಿದ್ಯುತ್ ದೊರೆಯಲಿದೆ ಎಂದರು.</p>.<p>ಬಿಜೆಪಿ ನಾಯಕರು ಹಿಂದೆ ನೀಡಿದ್ದ ಭರವಸೆಗಳನ್ನು ನಾಲ್ಕು ವರ್ಷಗಳಲ್ಲಿ ಈಡೇರಿಸಲಿಲ್ಲ. ನೀರಾವರಿಗೆ ₹1.50 ಲಕ್ಷ ವಿನಿಯೋಗಿಸಲಿಲ್ಲ. ರೈತರ ಸಾಲ ಮನ್ನಾಮಾಡಲಿಲ್ಲ. ಇದರಿಂದ ಜನರು ಅವರನ್ನು ಮನೆಗೆ ಕಳುಹಿಸಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕೊಟ್ಟ ಭರವಸೆ ಈಡೇರಿಸಿದೆ. ಅದನ್ನು ಸಹಿಸದೇ ಟೀಕೆ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ಹಿಂದೆಯೂ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿತ್ತು. ಈಗಲೂ ಭರವಸೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದರು.</p>.<p>ಪಠ್ಯ ಪರಿಷ್ಕರಣೆ, ಎನ್ ಇಪಿ ಕುರಿತು ತಜ್ಞರ ಜತೆ ಚರ್ಚಿಸಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.</p><p><strong>ಇದನ್ನೂ ಓದಿ... <a href="https://www.prajavani.net/news/karnataka-news/guidelines-for-gruha-jyoathi-and-shakti-schemes-2313689">ಗೃಹ ಜ್ಯೋತಿ, ಶಕ್ತಿ ಯೋಜನೆಗಳಿಗೆ ಮಾರ್ಗಸೂಚಿ: ಬಾಡಿಗೆದಾರರಿಗೆ ಸಿಗುವುದೇ ಗ್ಯಾರಂಟಿ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>