ಇದರ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಯಿತು. ಮುಂದಿನ ವಾರವೇ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಹೆಚ್ಚುವರಿ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರ ಖುದ್ದು ಹಾಜರಿಗೆ ಸೂಚನೆ ನೀಡಿದೆ. ಹೀಗಾಗಿ ಸಂಪುಟದಲ್ಲಿ ಚರ್ಚೆ ಮಾಡಿ ರಸ್ತೆ ಅಗಲೀಕರಣ ಮಾಡಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ. 15.5 ಎಕರೆ ಟಿಡಿಆರ್ ಕೊಡಲು ತಾತ್ವಿಕ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಟಿಡಿಆರ್ ಯಾರಿಗೆ ಕೊಡುವುದು ಎಂಬ ಪ್ರಶ್ನೆ ಎದುರಾಗಿದೆ ಎಂದು ಅವರು ಹೇಳಿದರು.