<p>ಬೆಂಗಳೂರು: ರಾಜ್ಯ ಸರ್ಕಾರವು ಆರು ತಿಂಗಳಿನಿಂದ ಈಚೆಗೆ ಮಾಡಿರುವ ಭೂ ಮಂಜೂರಾತಿ ಪ್ರಕರಣಗಳ ಕುರಿತು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p><p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 'ಯಾವ ಸಂಘ, ಸಂಸ್ಥೆಗಳಿಗೆ ಸರ್ಕಾರಿ ಜಮೀನುಗಳನ್ನು ಮಂಜೂರು ಮಾಡಲಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು. ಅನರ್ಹರಿಗೆ ಜಮೀನು ಮಂಜೂರು ಮಾಡಿದ್ದರೆ ಕ್ರಮ ಕೈಗೊಳ್ಳಲಾಗುವುದು' ಎಂದರು.</p><p>ಯಾವುದೇ ಧರ್ಮಕ್ಕೆ ಸೇರಿರಲಿ, ಯಾವುದೇ ಸಂಘ, ಸಂಸ್ಥೆಯಾಗಿದ್ದರೂ ಅರ್ಹತೆ ಒಂದೇ ಮಾನದಂಡ. ನಿಯಮ ಉಲ್ಲಂಘನೆ, ಅರ್ಹತೆ ಇಲ್ಲದೆ ಜಮೀನು ಮಂಜೂರು ಮಾಡಿದ್ದರೆ ಸಂಪುಟ ಸಭೆಯ ಮುಂದೆ ಪ್ರಕರಣ ಮಂಡಿಸಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.</p><p>ಹಿಂದಿನ ಸರ್ಕಾರ ಕೈಗೊಂಡ ಎಲ್ಲ ತೀರ್ಮಾನಗಳನ್ನೂ ಪರಿಶೀಲಿಸಲು ಆಗುವುದಿಲ್ಲ. ಆ ರೀತಿ ನಿರ್ಧರಿಸಿದರೆ ಬೇರೆ ಯಾವ ಕೆಲಸ ಮಾಡುವುದಕ್ಕೂ ಆಗುವುದಿಲ್ಲ. ಚುನಾವಣೆಯ ಸಮೀಪದಲ್ಲಿ ತರಾತುರಿಯಲ್ಲಿ ಕೈಗೊಂಡ ತೀರ್ಮಾನಗಳನ್ನಷ್ಟೇ ಪರಿಶೀಲಿಸಲಾಗುವುದು ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯ ಸರ್ಕಾರವು ಆರು ತಿಂಗಳಿನಿಂದ ಈಚೆಗೆ ಮಾಡಿರುವ ಭೂ ಮಂಜೂರಾತಿ ಪ್ರಕರಣಗಳ ಕುರಿತು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p><p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 'ಯಾವ ಸಂಘ, ಸಂಸ್ಥೆಗಳಿಗೆ ಸರ್ಕಾರಿ ಜಮೀನುಗಳನ್ನು ಮಂಜೂರು ಮಾಡಲಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು. ಅನರ್ಹರಿಗೆ ಜಮೀನು ಮಂಜೂರು ಮಾಡಿದ್ದರೆ ಕ್ರಮ ಕೈಗೊಳ್ಳಲಾಗುವುದು' ಎಂದರು.</p><p>ಯಾವುದೇ ಧರ್ಮಕ್ಕೆ ಸೇರಿರಲಿ, ಯಾವುದೇ ಸಂಘ, ಸಂಸ್ಥೆಯಾಗಿದ್ದರೂ ಅರ್ಹತೆ ಒಂದೇ ಮಾನದಂಡ. ನಿಯಮ ಉಲ್ಲಂಘನೆ, ಅರ್ಹತೆ ಇಲ್ಲದೆ ಜಮೀನು ಮಂಜೂರು ಮಾಡಿದ್ದರೆ ಸಂಪುಟ ಸಭೆಯ ಮುಂದೆ ಪ್ರಕರಣ ಮಂಡಿಸಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.</p><p>ಹಿಂದಿನ ಸರ್ಕಾರ ಕೈಗೊಂಡ ಎಲ್ಲ ತೀರ್ಮಾನಗಳನ್ನೂ ಪರಿಶೀಲಿಸಲು ಆಗುವುದಿಲ್ಲ. ಆ ರೀತಿ ನಿರ್ಧರಿಸಿದರೆ ಬೇರೆ ಯಾವ ಕೆಲಸ ಮಾಡುವುದಕ್ಕೂ ಆಗುವುದಿಲ್ಲ. ಚುನಾವಣೆಯ ಸಮೀಪದಲ್ಲಿ ತರಾತುರಿಯಲ್ಲಿ ಕೈಗೊಂಡ ತೀರ್ಮಾನಗಳನ್ನಷ್ಟೇ ಪರಿಶೀಲಿಸಲಾಗುವುದು ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>