<p><strong>ಬೆಳಗಾವಿ</strong>: ‘ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.</p>.<p>ಮಂಗಳವಾರ ಇಲ್ಲಿನ ಸುವರ್ಣಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮುಸ್ಲಿಂ ಸಮುದಾಯಕ್ಕೆ ಬಜೆಟ್ನಲ್ಲಿ ಅನುದಾನ ನೀಡುವುದಾಗಿ ಹೇಳಿದ್ದೇನೆ. ವರದಿ ಹೊರತು ಬೇರೇನೂ ಮಾತನಾಡಿಲ್ಲ. ಎರಡು ಪತ್ರಿಕೆಗಳಲ್ಲಿ ಮಾತ್ರ ಸರಿಯಾದ ವರದಿ ಬಂದಿದೆ’ ಎಂದರು.</p>.<p>ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ‘ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಅನುದಾನವನ್ನು ಹಿಂದಿನ ಸರ್ಕಾರ ಕಡಿತ ಮಾಡಿತ್ತು. ಮುಂದಿನ ದಿನಗಳಲ್ಲಿ ಅನುದಾನ ಹೆಚ್ಚಿಸುತ್ತೇನೆ. ₹10 ಸಾವಿರ ಕೋಟಿವರೆಗೆ ಅನುದಾನ ನೀಡಲು ಸಿದ್ಧ’ ಎಂದಿದ್ದರು.</p>.<p>ಈ ಬಗ್ಗೆ ಮಂಗಳವಾರ ಬೆಳಿಗ್ಗೆಯೇ ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕರು, ‘ಸಿದ್ದರಾಮಯ್ಯ ಮುಸ್ಲಿಮರ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ’ ಎಂದು ಹರಿಹಾಯ್ದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.</p>.<p>ಮಂಗಳವಾರ ಇಲ್ಲಿನ ಸುವರ್ಣಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮುಸ್ಲಿಂ ಸಮುದಾಯಕ್ಕೆ ಬಜೆಟ್ನಲ್ಲಿ ಅನುದಾನ ನೀಡುವುದಾಗಿ ಹೇಳಿದ್ದೇನೆ. ವರದಿ ಹೊರತು ಬೇರೇನೂ ಮಾತನಾಡಿಲ್ಲ. ಎರಡು ಪತ್ರಿಕೆಗಳಲ್ಲಿ ಮಾತ್ರ ಸರಿಯಾದ ವರದಿ ಬಂದಿದೆ’ ಎಂದರು.</p>.<p>ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ‘ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಅನುದಾನವನ್ನು ಹಿಂದಿನ ಸರ್ಕಾರ ಕಡಿತ ಮಾಡಿತ್ತು. ಮುಂದಿನ ದಿನಗಳಲ್ಲಿ ಅನುದಾನ ಹೆಚ್ಚಿಸುತ್ತೇನೆ. ₹10 ಸಾವಿರ ಕೋಟಿವರೆಗೆ ಅನುದಾನ ನೀಡಲು ಸಿದ್ಧ’ ಎಂದಿದ್ದರು.</p>.<p>ಈ ಬಗ್ಗೆ ಮಂಗಳವಾರ ಬೆಳಿಗ್ಗೆಯೇ ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕರು, ‘ಸಿದ್ದರಾಮಯ್ಯ ಮುಸ್ಲಿಮರ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ’ ಎಂದು ಹರಿಹಾಯ್ದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>