ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ‘ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಅನುದಾನವನ್ನು ಹಿಂದಿನ ಸರ್ಕಾರ ಕಡಿತ ಮಾಡಿತ್ತು. ಮುಂದಿನ ದಿನಗಳಲ್ಲಿ ಅನುದಾನ ಹೆಚ್ಚಿಸುತ್ತೇನೆ. ₹10 ಸಾವಿರ ಕೋಟಿವರೆಗೆ ಅನುದಾನ ನೀಡಲು ಸಿದ್ಧ’ ಎಂದಿದ್ದರು.