ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ತಮ್ಮ ಸರ್ಕಾರ ಬದ್ಧವಾಗಿದೆ. ಅವರ ಹಕ್ಕುಗಳ ದಮನಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಬೆಂಗಳೂರಿನಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪ್ರತಿನಿಧಿಗಳು ಮುಖ್ಯಮಂತ್ರಿಯವರನ್ನು ಬುಧವಾರ ಭೇಟಿಮಾಡಿ, ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ , ಸರ್ಕಾರವು ಅಲ್ಪಸಂಖ್ಯಾತರು, ಆದಿವಾಸಿಗಳು ಮತ್ತು ಬುಡಕಟ್ಟು ಜನರ ಹಿತಾಸಕ್ತಿ ರಕ್ಷಣೆಗೆ ಆದ್ಯತೆ ನೀಡಲಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.