<p>ಮಧ್ಯಾಹ್ನ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಪಸ್ಥಿತಿ ಕಾರಣ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಹಸ್ತಾಂತರಿಸಿದರು. ತುರ್ತುಕಾರ್ಯದ ನಿಮಿತ್ತ ಬುಧವಾರ ತಡರಾತ್ರಿ ಗೆಹಲೋತ್ ಅವರು ತಮ್ಮ ತವರು ಇಂದೋರ್ಗೆ ತೆರಳಿದ್ದರು. ರಾಜೀನಾಮೆ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಕೆಲವು ಶಾಸಕರು, ಪರಿಷತ್ ಸದಸ್ಯರು ಸಿದ್ದರಾಮಯ್ಯ ಅವರಿಗೆ ಜತೆಯಾದರು. ರಾಜ್ಯಪಾಲರು ಮರಳಿದ ನಂತರ ರಾಜೀನಾಮೆ ಪತ್ರವನ್ನು ಕೂಲಂಕಶವಾಗಿ ಪರಿಶೀಲಿಸಿ ಅಧಿಕೃತವಾಗಿ ಅಂಗೀಕರಿಸಲಿದ್ದಾರೆ.</p>.<p>ಸಚಿವರ ಕಣ್ಣೀರು; ಭಾವುಕರಾದ ಸಿ.ಎಂ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಉಪಾಹಾರ ಸಭೆಯಲ್ಲಿ ಸಿದ್ದರಾಮಯ್ಯ ಪ್ರಕಟಿಸುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ನೀರವ ಮೌನ ಆವರಿಸಿತು.</p>.<p>ಸುಮಾರು ಎರಡೂವರೆ ತಾಸು ಈ ಸಭೆ ನಡೆಯಿತು. ಸಿದ್ದರಾಮಯ್ಯ ಅವರ ಅಕ್ಕಪಕ್ಕದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಜಿ. ಪರಮೇಶ್ವರ ಇದ್ದರು. ಸಿದ್ದರಾಮಯ್ಯ ಅವರ ಮಾತು ಆಲಿಸುತ್ತಲೇ ಕೆಲವು ಸಚಿವರು ತೀವ್ರ ಭಾವೋದ್ವೇಗಕ್ಕೆ ಒಳಗಾದರು. ಸಭೆಗಳಲ್ಲಿ ಸದಾ ಗಂಭೀರವಾಗಿರುತ್ತಿದ್ದ ಸಿದ್ದರಾಮಯ್ಯ ಅವರೂ ಒಂದು ಕ್ಷಣ ಭಾವುಕರಾದರು.</p>.<p>‘ಕಳೆದ ಮೂರು ವರ್ಷಗಳ ಆಡಳಿತಾವಧಿಯಲ್ಲಿ ನಾನು ಮಾಡಿದ ಕೆಲಸಗಳು ಸಂಪೂರ್ಣ ಸಮಾಧಾನ ತಂದಿದೆ. ನಿಮ್ಮೆಲ್ಲರ ಸಹಕಾರಕ್ಕೆ ಧನ್ಯವಾದಗಳು’ ಎಂದು ಸಿದ್ದರಾಮಯ್ಯ ಗದ್ಗದಿತ ಕಂಠದಿಂದ ನುಡಿದರು ಎಂದು ಮೂಲಗಳು ಹೇಳಿವೆ.</p>.<p>ಸಭೆಯಲ್ಲಿ ಸಚಿವರಾದ ಎಚ್.ಕೆ. ಪಾಟೀಲ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ ಸೇರಿದಂತೆ ಪ್ರಮುಖ ನಾಯಕರು ಇದ್ದರು. ಸಭೆ ಮುಗಿದ ನಂತರ ಬಹುತೇಕ ಸಚಿವರು ಕೈ ಮುಗಿಯುತ್ತಾ ಮುಖ್ಯಮಂತ್ರಿ ಮನೆಯಿಂದ ಹೊರಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-51-1760005386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧ್ಯಾಹ್ನ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಪಸ್ಥಿತಿ ಕಾರಣ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಹಸ್ತಾಂತರಿಸಿದರು. ತುರ್ತುಕಾರ್ಯದ ನಿಮಿತ್ತ ಬುಧವಾರ ತಡರಾತ್ರಿ ಗೆಹಲೋತ್ ಅವರು ತಮ್ಮ ತವರು ಇಂದೋರ್ಗೆ ತೆರಳಿದ್ದರು. ರಾಜೀನಾಮೆ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಕೆಲವು ಶಾಸಕರು, ಪರಿಷತ್ ಸದಸ್ಯರು ಸಿದ್ದರಾಮಯ್ಯ ಅವರಿಗೆ ಜತೆಯಾದರು. ರಾಜ್ಯಪಾಲರು ಮರಳಿದ ನಂತರ ರಾಜೀನಾಮೆ ಪತ್ರವನ್ನು ಕೂಲಂಕಶವಾಗಿ ಪರಿಶೀಲಿಸಿ ಅಧಿಕೃತವಾಗಿ ಅಂಗೀಕರಿಸಲಿದ್ದಾರೆ.</p>.<p>ಸಚಿವರ ಕಣ್ಣೀರು; ಭಾವುಕರಾದ ಸಿ.ಎಂ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಉಪಾಹಾರ ಸಭೆಯಲ್ಲಿ ಸಿದ್ದರಾಮಯ್ಯ ಪ್ರಕಟಿಸುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ನೀರವ ಮೌನ ಆವರಿಸಿತು.</p>.<p>ಸುಮಾರು ಎರಡೂವರೆ ತಾಸು ಈ ಸಭೆ ನಡೆಯಿತು. ಸಿದ್ದರಾಮಯ್ಯ ಅವರ ಅಕ್ಕಪಕ್ಕದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಜಿ. ಪರಮೇಶ್ವರ ಇದ್ದರು. ಸಿದ್ದರಾಮಯ್ಯ ಅವರ ಮಾತು ಆಲಿಸುತ್ತಲೇ ಕೆಲವು ಸಚಿವರು ತೀವ್ರ ಭಾವೋದ್ವೇಗಕ್ಕೆ ಒಳಗಾದರು. ಸಭೆಗಳಲ್ಲಿ ಸದಾ ಗಂಭೀರವಾಗಿರುತ್ತಿದ್ದ ಸಿದ್ದರಾಮಯ್ಯ ಅವರೂ ಒಂದು ಕ್ಷಣ ಭಾವುಕರಾದರು.</p>.<p>‘ಕಳೆದ ಮೂರು ವರ್ಷಗಳ ಆಡಳಿತಾವಧಿಯಲ್ಲಿ ನಾನು ಮಾಡಿದ ಕೆಲಸಗಳು ಸಂಪೂರ್ಣ ಸಮಾಧಾನ ತಂದಿದೆ. ನಿಮ್ಮೆಲ್ಲರ ಸಹಕಾರಕ್ಕೆ ಧನ್ಯವಾದಗಳು’ ಎಂದು ಸಿದ್ದರಾಮಯ್ಯ ಗದ್ಗದಿತ ಕಂಠದಿಂದ ನುಡಿದರು ಎಂದು ಮೂಲಗಳು ಹೇಳಿವೆ.</p>.<p>ಸಭೆಯಲ್ಲಿ ಸಚಿವರಾದ ಎಚ್.ಕೆ. ಪಾಟೀಲ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ ಸೇರಿದಂತೆ ಪ್ರಮುಖ ನಾಯಕರು ಇದ್ದರು. ಸಭೆ ಮುಗಿದ ನಂತರ ಬಹುತೇಕ ಸಚಿವರು ಕೈ ಮುಗಿಯುತ್ತಾ ಮುಖ್ಯಮಂತ್ರಿ ಮನೆಯಿಂದ ಹೊರಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-51-1760005386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>