<p><strong>ಬೆಂಗಳೂರು:</strong> ‘ಹತ್ತು ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ 'ವಿನಾಶ ಕಾಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.</p>.<p>‘ಬಿಜೆಪಿ ಅವಧಿಯಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟ–ಕಾರ್ಪಣ್ಯಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ದೂರಿದ್ದಾರೆ.</p>.<p>‘ಹತ್ತು ವರ್ಷಗಳ ಹಿಂದೆ ಮತದಾರರಿಗೆ ನೀಡಿದ್ದ ಒಂದೇ ಒಂದು ಭರವಸೆಯನ್ನು ಮೋದಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಈಡೇರಿಸಿಲ್ಲ. ರೈತರ ಆದಾಯದ ದುಪ್ಪಟ್ಟು, ಯುವಜನರಿಗೆ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ , ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳಿಗೆ ರಕ್ಷಣೆ, ಅಗ್ಗದ ದರದಲ್ಲಿ ಅಗತ್ಯವಸ್ತುಗಳ ಪೂರೈಕೆ ಮೊದಲಾದ ಬಣ್ಣಬಣ್ಣದ ಭರವಸೆಗಳನ್ನು ನೀಡಿದ್ದ ಅವರು, ಗೆದ್ದ ನಂತರ ಅವುಗಳನ್ನು ಮರೆತು ದೇವರು- ಧರ್ಮದ ಹೆಸರಿನ ಭಾವನಾತ್ಮಕ ರಾಜಕಾರಣ, ಉದ್ಯಮಿಗಳ ತುಷ್ಟೀಕರಣದಲ್ಲಿ ಮುಳುಗಿದ್ದಾರೆ’ ಎಂದು ಕುಟುಕಿದ್ದಾರೆ.</p>.<p>‘ಹತ್ತು ವರ್ಷಗಳ ನರೇಂದ್ರ ಮೋದಿಯವರ ಅನ್ಯಾಯ ಕಾಲದ ವಿವರಗಳನ್ನು ಅಂಕಿ–ಅಂಶಗಳ ಸಹಿತ ಕರ್ನಾಟಕದ ಜನತೆಯ ಮುಂದೆ ಇಡುತ್ತಿದ್ದೇನೆ. ದೇಶ ಇಂದು ಅಮೃತ ಕಾಲದಲ್ಲಿ ಇದೆಯೊ? ಅನ್ಯಾಯದ ಕಾಲದಲ್ಲಿ ಇದೆಯೊ? ಎಂದು ಜನರೇ ತೀರ್ಮಾನಿಸಲಿ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹತ್ತು ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ 'ವಿನಾಶ ಕಾಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.</p>.<p>‘ಬಿಜೆಪಿ ಅವಧಿಯಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟ–ಕಾರ್ಪಣ್ಯಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ದೂರಿದ್ದಾರೆ.</p>.<p>‘ಹತ್ತು ವರ್ಷಗಳ ಹಿಂದೆ ಮತದಾರರಿಗೆ ನೀಡಿದ್ದ ಒಂದೇ ಒಂದು ಭರವಸೆಯನ್ನು ಮೋದಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಈಡೇರಿಸಿಲ್ಲ. ರೈತರ ಆದಾಯದ ದುಪ್ಪಟ್ಟು, ಯುವಜನರಿಗೆ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ , ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳಿಗೆ ರಕ್ಷಣೆ, ಅಗ್ಗದ ದರದಲ್ಲಿ ಅಗತ್ಯವಸ್ತುಗಳ ಪೂರೈಕೆ ಮೊದಲಾದ ಬಣ್ಣಬಣ್ಣದ ಭರವಸೆಗಳನ್ನು ನೀಡಿದ್ದ ಅವರು, ಗೆದ್ದ ನಂತರ ಅವುಗಳನ್ನು ಮರೆತು ದೇವರು- ಧರ್ಮದ ಹೆಸರಿನ ಭಾವನಾತ್ಮಕ ರಾಜಕಾರಣ, ಉದ್ಯಮಿಗಳ ತುಷ್ಟೀಕರಣದಲ್ಲಿ ಮುಳುಗಿದ್ದಾರೆ’ ಎಂದು ಕುಟುಕಿದ್ದಾರೆ.</p>.<p>‘ಹತ್ತು ವರ್ಷಗಳ ನರೇಂದ್ರ ಮೋದಿಯವರ ಅನ್ಯಾಯ ಕಾಲದ ವಿವರಗಳನ್ನು ಅಂಕಿ–ಅಂಶಗಳ ಸಹಿತ ಕರ್ನಾಟಕದ ಜನತೆಯ ಮುಂದೆ ಇಡುತ್ತಿದ್ದೇನೆ. ದೇಶ ಇಂದು ಅಮೃತ ಕಾಲದಲ್ಲಿ ಇದೆಯೊ? ಅನ್ಯಾಯದ ಕಾಲದಲ್ಲಿ ಇದೆಯೊ? ಎಂದು ಜನರೇ ತೀರ್ಮಾನಿಸಲಿ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>