<p><strong>ಬೆಂಗಳೂರು:</strong> ಜಂಟಿ ಅಧಿವೇಶನಕ್ಕೆ ಸರ್ಕಾರ ಸಿದ್ಧಪಡಿಸಿದ 28 ಪುಟಗಳ ಭಾಷಣವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಗುರುವಾರ) ಸದನದಲ್ಲಿ ಮಂಡಿಸಿ ಶಾಸಕರಿಗೆ ವಿತರಿಸಿದರು.</p><p>ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿಕೊಂಡು ಬಂದಿದ್ದ ಭಾಷಣವನ್ನು ಓದಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ನಿರ್ಗಮಿಸಿದ್ದರು. </p>.ಸರ್ಕಾರದ ಭಾಷಣಕ್ಕೆ ಕೊಕ್; ತಾವೇ ಸಿದ್ಧಪಡಿಸಿದ ಭಾಷಣ ಓದಿ ಹೊರನಡೆದ ರಾಜ್ಯಪಾಲ.ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿದ್ದರಾಮಯ್ಯ ಕಿಡಿ.<p>ರಾಜ್ಯಪಾಲರ ಈ ನಡೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.</p><p>‘ರಾಜ್ಯಪಾಲರು ಸಚಿವ ಸಂಪುಟ ತಯಾರಿಸಿದ ಭಾಷಣ ಓದದೆ, ಅವರೇ ತಯಾರು ಮಾಡಿದ ಒಂದು ಪ್ಯಾರಾ ಭಾಷಣ ಓದಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ’ ಎಂದು ಹೇಳಿದ್ದಾರೆ. </p><p>‘ಸರ್ಕಾರ ತಯಾರಿ ಮಾಡಿದ ಭಾಷಣವನ್ನು ಎಲ್ಲ ಶಾಸಕರಿಗೆ, ಪರಿಷತ್ ಸದಸ್ಯರಿಗೆ ನೀಡಿದ್ದೇವೆ’ ಎಂದೂ ಅವರು ತಿಳಿಸಿದ್ದಾರೆ. </p><p>ಸರ್ಕಾರ ಸಿದ್ಧಪಡಿಸಿದ ಭಾಷಣದ ಪೂರ್ಣ ಪಾಠ ಇಲ್ಲಿದೆ... (ಪಿಡಿಎಫ್ ಫೈಲ್ ಲಗತ್ತಿಸಲಾಗಿದೆ.)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಂಟಿ ಅಧಿವೇಶನಕ್ಕೆ ಸರ್ಕಾರ ಸಿದ್ಧಪಡಿಸಿದ 28 ಪುಟಗಳ ಭಾಷಣವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಗುರುವಾರ) ಸದನದಲ್ಲಿ ಮಂಡಿಸಿ ಶಾಸಕರಿಗೆ ವಿತರಿಸಿದರು.</p><p>ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿಕೊಂಡು ಬಂದಿದ್ದ ಭಾಷಣವನ್ನು ಓದಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ನಿರ್ಗಮಿಸಿದ್ದರು. </p>.ಸರ್ಕಾರದ ಭಾಷಣಕ್ಕೆ ಕೊಕ್; ತಾವೇ ಸಿದ್ಧಪಡಿಸಿದ ಭಾಷಣ ಓದಿ ಹೊರನಡೆದ ರಾಜ್ಯಪಾಲ.ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿದ್ದರಾಮಯ್ಯ ಕಿಡಿ.<p>ರಾಜ್ಯಪಾಲರ ಈ ನಡೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.</p><p>‘ರಾಜ್ಯಪಾಲರು ಸಚಿವ ಸಂಪುಟ ತಯಾರಿಸಿದ ಭಾಷಣ ಓದದೆ, ಅವರೇ ತಯಾರು ಮಾಡಿದ ಒಂದು ಪ್ಯಾರಾ ಭಾಷಣ ಓದಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ’ ಎಂದು ಹೇಳಿದ್ದಾರೆ. </p><p>‘ಸರ್ಕಾರ ತಯಾರಿ ಮಾಡಿದ ಭಾಷಣವನ್ನು ಎಲ್ಲ ಶಾಸಕರಿಗೆ, ಪರಿಷತ್ ಸದಸ್ಯರಿಗೆ ನೀಡಿದ್ದೇವೆ’ ಎಂದೂ ಅವರು ತಿಳಿಸಿದ್ದಾರೆ. </p><p>ಸರ್ಕಾರ ಸಿದ್ಧಪಡಿಸಿದ ಭಾಷಣದ ಪೂರ್ಣ ಪಾಠ ಇಲ್ಲಿದೆ... (ಪಿಡಿಎಫ್ ಫೈಲ್ ಲಗತ್ತಿಸಲಾಗಿದೆ.)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>