ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.
‘ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ ಎಂದು ಅವರು ಕಿಡಿಕಾರಿದ್ದಾರೆ.
‘ಹಲವು ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದಾಗಿದೆ’ ಎಂದು ನುಡಿದಿದ್ದಾರೆ.
‘ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ’ ಎಂದು ಹೇಳಿದ್ದಾರೆ.
ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದಿದ್ದಾರೆ.
ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ.
— Siddaramaiah (@siddaramaiah) May 20, 2024
ಭ್ರಷ್ಟಾಚಾರ, ದುರಾಡಳಿತ… pic.twitter.com/17yGeflgtr
ಗ್ಯಾರಂಟಿ ಸರ್ಕಾರಕ್ಕೆ ಸಂವತ್ಸರ
— DK Shivakumar (@DKShivakumar) May 20, 2024
ಈಡೇರಿವೆ ಜನರ ಆಶೋತ್ತರ#ಪ್ರಗತಿಯಗ್ಯಾರಂಟಿ#OneYearOfGuaranteeGovt pic.twitter.com/zTrWLA567R
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.