<p><strong>ಬೆಂಗಳೂರು</strong>: ಯುದ್ಧ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ಮತ್ತು ಇತರ ಭಾರತೀಯರಿಗೆ ಸೂಕ್ತ ರಕ್ಷಣೆ ಮತ್ತು ಸುರಕ್ಷಿತ ನೆಲೆ ಒದಗಿಸಲು ಆಯಾ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.</p>.<p>ಈ ಸಂಬಂಧ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದಿದ್ದಾರೆ.</p>.<p>ಆ ದೇಶಗಳಲ್ಲಿರುವ ಕನ್ನಡಿಗರು ಮತ್ತು ಇತರ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಕ್ರಮ ತೆಗೆದುಕೊಳ್ಳಬೇಕು ಎಂದೂ ಒತ್ತಾಯಿಸಿದ್ದಾರೆ.</p>.<p><strong>ಸಿಎಂ ಸಲಹೆಗಳು...</strong></p><p>* ಯುದ್ಧ ಪೀಡಿತ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿರುವ ಕನ್ನಡಿಗರು ಮತ್ತು ಇತರ ಭಾರತೀಯ ನಾಗರಿಕರ ಜತೆ ನಿರಂತರ ಸಂಪರ್ಕದಲ್ಲಿದ್ದು, ಅವರ ಯೋಗ ಕ್ಷೇಮ ಕುರಿತು ನಿಗಾವಹಿಸಬೇಕು. ಸಕಾಲದಲ್ಲಿ ಅಗತ್ಯ ಮಾರ್ಗದರ್ಶನ ನೀಡಬೇಕು.</p>.<p>* ಭಾರತೀಯ ನಾಗರಿಕರನ್ನು ವಿಶೇಷ ವಿಮಾನಗಳ ಮೂಲಕ ಸುರಕ್ಷಿತವಾಗಿ ವಾಪಸ್ ಕರೆತರಲು ಅಥವಾ ಸ್ಥಳಾಂತರಿಸಲು ಸನ್ನದ್ಧ ಸ್ಥಿತಿಯಲ್ಲಿರಬೇಕು. ವಿದೇಶಾಂಗ, ನಾಗರಿಕ ವಿಮಾನಯಾನ ಸಚಿವಾಲಯ, ರಾಜ್ಯ ಸರ್ಕಾರಗಳು ಮತ್ತು ವಿಮಾನ ಯಾನ ಸಂಸ್ಥೆಗಳ ಮಧ್ಯೆ ಸಮನ್ವಯಕ್ಕೆ ರಾಷ್ಟ್ರೀಯ ಮಟ್ಟದ ಸಮನ್ವಯ ವ್ಯವಸ್ಥೆಯೊಂದನ್ನು ರೂಪಿಸಬೇಕು.</p>.<p>* ಕನ್ನಡಿಗರು ಮತ್ತು ಇತರ ಭಾರತೀಯರ ಕುಟುಂಬಗಳಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಲು, ಕೇಂದ್ರೀಕೃತ ಡಿಜಿಟಲ್ ವ್ಯವಸ್ಥೆಯನ್ನು ರೂಪಿಸಬೇಕು. ನೋಂದಣಿ, ಟ್ರ್ಯಾಕಿಂಗ್, ನೈಜ ಸಮಯದಲ್ಲಿ ಮಾಹಿತಿ ರವಾನೆ ಮಾಡಬೇಕು.</p>.<p>* ವಿಮಾನಗಳ ಹಾರಾಟದ ಸಮಯದ ಬಗ್ಗೆ ವಿಮಾನಯಾನ ಸಂಸ್ಥೆಗಳು ಹೊಂದಾಣಿಕೆ ಮಾಡಿಕೊಳ್ಳಬೇಕು. ಅನಗತ್ಯವಾಗಿ ಹೆಚ್ಚುವರಿ ದರ ವಿಧಿಸಬಾರದು, ಅಗತ್ಯ ಸಂದರ್ಭಗಳಲ್ಲಿ ಮಾನವೀಯ ನೆರವು ನೀಡಬೇಕು ಎಂಬ ನಿರ್ದೇಶವನ್ನು ನೀಡಬೇಕು.</p>.<p>ಪಶ್ಚಿಮ ಏಷ್ಯಾದಲ್ಲಿ ಭಾರತೀಯರು ಅಪಾರ ಸಂಖ್ಯೆಯಲ್ಲಿದ್ದಾರೆ. ರಾಷ್ಟ್ರದ ಆರ್ಥಿಕ ಬೆಳವಣಿಗೆಗೆ ಇವರ ಕೊಡುಗೆ ಅಪಾರ ಮತ್ತು ಜಾಗತಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತ್ವರಿತ, ಸಮನ್ವಯ ಮತ್ತು ಸಹಾನುಭೂತಿಯಿಂದ ಕೂಡಿದ ರಾಷ್ಟ್ರೀಯ ಸ್ಪಂದನೆಯ ಅಗತ್ಯವಿದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯುದ್ಧ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ಮತ್ತು ಇತರ ಭಾರತೀಯರಿಗೆ ಸೂಕ್ತ ರಕ್ಷಣೆ ಮತ್ತು ಸುರಕ್ಷಿತ ನೆಲೆ ಒದಗಿಸಲು ಆಯಾ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.</p>.<p>ಈ ಸಂಬಂಧ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದಿದ್ದಾರೆ.</p>.<p>ಆ ದೇಶಗಳಲ್ಲಿರುವ ಕನ್ನಡಿಗರು ಮತ್ತು ಇತರ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಕ್ರಮ ತೆಗೆದುಕೊಳ್ಳಬೇಕು ಎಂದೂ ಒತ್ತಾಯಿಸಿದ್ದಾರೆ.</p>.<p><strong>ಸಿಎಂ ಸಲಹೆಗಳು...</strong></p><p>* ಯುದ್ಧ ಪೀಡಿತ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿರುವ ಕನ್ನಡಿಗರು ಮತ್ತು ಇತರ ಭಾರತೀಯ ನಾಗರಿಕರ ಜತೆ ನಿರಂತರ ಸಂಪರ್ಕದಲ್ಲಿದ್ದು, ಅವರ ಯೋಗ ಕ್ಷೇಮ ಕುರಿತು ನಿಗಾವಹಿಸಬೇಕು. ಸಕಾಲದಲ್ಲಿ ಅಗತ್ಯ ಮಾರ್ಗದರ್ಶನ ನೀಡಬೇಕು.</p>.<p>* ಭಾರತೀಯ ನಾಗರಿಕರನ್ನು ವಿಶೇಷ ವಿಮಾನಗಳ ಮೂಲಕ ಸುರಕ್ಷಿತವಾಗಿ ವಾಪಸ್ ಕರೆತರಲು ಅಥವಾ ಸ್ಥಳಾಂತರಿಸಲು ಸನ್ನದ್ಧ ಸ್ಥಿತಿಯಲ್ಲಿರಬೇಕು. ವಿದೇಶಾಂಗ, ನಾಗರಿಕ ವಿಮಾನಯಾನ ಸಚಿವಾಲಯ, ರಾಜ್ಯ ಸರ್ಕಾರಗಳು ಮತ್ತು ವಿಮಾನ ಯಾನ ಸಂಸ್ಥೆಗಳ ಮಧ್ಯೆ ಸಮನ್ವಯಕ್ಕೆ ರಾಷ್ಟ್ರೀಯ ಮಟ್ಟದ ಸಮನ್ವಯ ವ್ಯವಸ್ಥೆಯೊಂದನ್ನು ರೂಪಿಸಬೇಕು.</p>.<p>* ಕನ್ನಡಿಗರು ಮತ್ತು ಇತರ ಭಾರತೀಯರ ಕುಟುಂಬಗಳಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಲು, ಕೇಂದ್ರೀಕೃತ ಡಿಜಿಟಲ್ ವ್ಯವಸ್ಥೆಯನ್ನು ರೂಪಿಸಬೇಕು. ನೋಂದಣಿ, ಟ್ರ್ಯಾಕಿಂಗ್, ನೈಜ ಸಮಯದಲ್ಲಿ ಮಾಹಿತಿ ರವಾನೆ ಮಾಡಬೇಕು.</p>.<p>* ವಿಮಾನಗಳ ಹಾರಾಟದ ಸಮಯದ ಬಗ್ಗೆ ವಿಮಾನಯಾನ ಸಂಸ್ಥೆಗಳು ಹೊಂದಾಣಿಕೆ ಮಾಡಿಕೊಳ್ಳಬೇಕು. ಅನಗತ್ಯವಾಗಿ ಹೆಚ್ಚುವರಿ ದರ ವಿಧಿಸಬಾರದು, ಅಗತ್ಯ ಸಂದರ್ಭಗಳಲ್ಲಿ ಮಾನವೀಯ ನೆರವು ನೀಡಬೇಕು ಎಂಬ ನಿರ್ದೇಶವನ್ನು ನೀಡಬೇಕು.</p>.<p>ಪಶ್ಚಿಮ ಏಷ್ಯಾದಲ್ಲಿ ಭಾರತೀಯರು ಅಪಾರ ಸಂಖ್ಯೆಯಲ್ಲಿದ್ದಾರೆ. ರಾಷ್ಟ್ರದ ಆರ್ಥಿಕ ಬೆಳವಣಿಗೆಗೆ ಇವರ ಕೊಡುಗೆ ಅಪಾರ ಮತ್ತು ಜಾಗತಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತ್ವರಿತ, ಸಮನ್ವಯ ಮತ್ತು ಸಹಾನುಭೂತಿಯಿಂದ ಕೂಡಿದ ರಾಷ್ಟ್ರೀಯ ಸ್ಪಂದನೆಯ ಅಗತ್ಯವಿದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>