ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಮಂಗಳವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ತುರ್ತು ನಿಗಾ ಘಟಕದಲ್ಲಿ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಇಂದು ವೈದ್ಯರು ವಾರ್ಡ್ ಗೆ ಸ್ಥಳಾಂತರಿಸಲಿದ್ದಾರೆ ಎಂದು ಮುಖ್ಯಮಂತ್ರಿಯ ಕಚೇರಿ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ತಾಯಿಯ ಜೊತೆ ಇದ್ದಾರೆ.
ಪತ್ನಿಯ ಅನಾರೋಗ್ಯದ ಕಾರಣ ಸಿದ್ದರಾಮಯ್ಯ ಅವರು ಒಂದು ಗಂಟೆ ತಡವಾಗಿ ದೆಹಲಿಗೆ ತೆರಳಲಿದ್ದಾರೆ.