<p><strong>ಬೆಂಗಳೂರು</strong>: ‘ಗುರುವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗ ನೀಡಿದ ಪತ್ರವನ್ನು ಹರಿದುಹಾಕಿದ್ದಾರೆ ಎಂಬುದರಲ್ಲಿ ಸತ್ಯಾಂಶವಿಲ್ಲ’ ಎಂದು ಮುಖ್ಯಮಂತ್ರಿಯವರ ಸಚಿವಾಲಯ ತಿಳಿಸಿದೆ.</p>.<p>‘ಬಸವರಾಜ್ ಶಿವಗಂಗ ಶಾಸಕಾಂಗ ಪಕ್ಷದ ಸಭೆಗೆ ಪತ್ರವೊಂದನ್ನು ತಂದಿದ್ದರು. ಆದರೆ, ಅದನ್ನು ಅವರು ಮುಖ್ಯಮಂತ್ರಿಯವರಿಗೆ ನೀಡಿರಲಿಲ್ಲ. ಅದನ್ನು ಮುಖ್ಯಮಂತ್ರಿಯವರು ಹರಿದುಹಾಕಲೂ ಇಲ್ಲ’ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ.</p>.<p><strong>ಇದನ್ನು</strong> <strong>ಓದಿ</strong>: <a href="https://www.prajavani.net/news/karnataka-news/karnataka-politics-karnataka-government-siddaramaiah-dk-shivakumar-congress-clp-meeting-2415659">ಸಚಿವರ ದುರಹಂಕಾರಕ್ಕೆ ಕಿಡಿ: ಮಧ್ಯವರ್ತಿಗಳ ಹಾವಳಿ ತಡೆಗೆ ‘ಕೈ’ ಶಾಸಕರ ಆಗ್ರಹ</a></p>.<p>‘ಕೆಲಸ ಮಾಡಿಸಿಕೊಳ್ಳಲು ಅನುಕೂಲವಾಗುವಂತೆ ನಮ್ಮನ್ನೇ (ಶಾಸಕರನ್ನು) ಸಚಿವರ ವಿಶೇಷಾಧಿಕಾರಿಯಾಗಿ ನೇಮಿಸಿ’ ಎಂಬ ವ್ಯಂಗ್ಯಭರಿತ ಕೋರಿಕೆಯುಳ್ಳ ಪತ್ರವನ್ನು ಬಸವರಾಜ್ ಮುಖ್ಯಮಂತ್ರಿಯವರಿಗೆ ನೀಡಿದ್ದರು. ಅದನ್ನು ಸಿದ್ದರಾಮಯ್ಯ ಹರಿದುಹಾಕಿದ್ದರು’ ಎಂದು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ಪ್ರಕಟವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗುರುವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗ ನೀಡಿದ ಪತ್ರವನ್ನು ಹರಿದುಹಾಕಿದ್ದಾರೆ ಎಂಬುದರಲ್ಲಿ ಸತ್ಯಾಂಶವಿಲ್ಲ’ ಎಂದು ಮುಖ್ಯಮಂತ್ರಿಯವರ ಸಚಿವಾಲಯ ತಿಳಿಸಿದೆ.</p>.<p>‘ಬಸವರಾಜ್ ಶಿವಗಂಗ ಶಾಸಕಾಂಗ ಪಕ್ಷದ ಸಭೆಗೆ ಪತ್ರವೊಂದನ್ನು ತಂದಿದ್ದರು. ಆದರೆ, ಅದನ್ನು ಅವರು ಮುಖ್ಯಮಂತ್ರಿಯವರಿಗೆ ನೀಡಿರಲಿಲ್ಲ. ಅದನ್ನು ಮುಖ್ಯಮಂತ್ರಿಯವರು ಹರಿದುಹಾಕಲೂ ಇಲ್ಲ’ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ.</p>.<p><strong>ಇದನ್ನು</strong> <strong>ಓದಿ</strong>: <a href="https://www.prajavani.net/news/karnataka-news/karnataka-politics-karnataka-government-siddaramaiah-dk-shivakumar-congress-clp-meeting-2415659">ಸಚಿವರ ದುರಹಂಕಾರಕ್ಕೆ ಕಿಡಿ: ಮಧ್ಯವರ್ತಿಗಳ ಹಾವಳಿ ತಡೆಗೆ ‘ಕೈ’ ಶಾಸಕರ ಆಗ್ರಹ</a></p>.<p>‘ಕೆಲಸ ಮಾಡಿಸಿಕೊಳ್ಳಲು ಅನುಕೂಲವಾಗುವಂತೆ ನಮ್ಮನ್ನೇ (ಶಾಸಕರನ್ನು) ಸಚಿವರ ವಿಶೇಷಾಧಿಕಾರಿಯಾಗಿ ನೇಮಿಸಿ’ ಎಂಬ ವ್ಯಂಗ್ಯಭರಿತ ಕೋರಿಕೆಯುಳ್ಳ ಪತ್ರವನ್ನು ಬಸವರಾಜ್ ಮುಖ್ಯಮಂತ್ರಿಯವರಿಗೆ ನೀಡಿದ್ದರು. ಅದನ್ನು ಸಿದ್ದರಾಮಯ್ಯ ಹರಿದುಹಾಕಿದ್ದರು’ ಎಂದು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ಪ್ರಕಟವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>